Breaking News
Home / ರಾಜಕೀಯ / ಬೆನ್ನಿಗೆ ಚೂರಿ ಹಾಕಿದವರಿಗೆ ಅವಕಾಶ ನೀಡಲಾಗುತ್ತಿದೆ:ಶಾಸಕ ಸಿದ್ದು ಸವದಿ ಹೇಳಿಕೆ

ಬೆನ್ನಿಗೆ ಚೂರಿ ಹಾಕಿದವರಿಗೆ ಅವಕಾಶ ನೀಡಲಾಗುತ್ತಿದೆ:ಶಾಸಕ ಸಿದ್ದು ಸವದಿ ಹೇಳಿಕೆ

Spread the love

ಬೆಂಗಳೂರು : ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ರಚನೆಯಾದ ಹಿನ್ನಲೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಭಾರಿ ಬೇಸರವುಂಟಾಗಿದೆ. ಅವರಲ್ಲಿ ಶಾಸಕ ಸಿದ್ದು ಸವದಿ ಸಹ ಇದ್ದಾರೆ. ಸಿಎಂ ಬೊಮ್ಮಾಯಿ ವಿರುದ್ಧ ಕಿಡಿ ಕಾರಿದ್ದಾರೆ. ಆಕಾಂಕ್ಷಿಗಳ ಪಟ್ಟಿಯಲ್ಲಿ ತೇರದಾಳದ ಶಾಸಕ ಸಿದ್ದು ಸವದಿ ಸಹ ಇದ್ದರು. ಸಚಿವ ಸ್ಥಾನದ ಪಟ್ಟಿಯಲ್ಲಿ ಅವರ ಹೆಸರು ಇಲ್ಲ. ಹಾಗಾಗಿ ಆಕ್ರೋಶ ಹೊರಹಾಕಿದ ಅವರು ಬಕೆಟ್ ಹಿಡಿದವರಿಗೆ, ಲಾಬಿ ಮಾಡಿದವರಿಗೆ ಮಂತ್ರಿ ಸ್ಥಾನ ನೀಡಲಾಗುತ್ತಿದೆ.

ಬೆನ್ನಿಗೆ ಚೂರಿ ಹಾಕಿದವರಿಗೆ ಅವಕಾಶ ನೀಡಲಾಗುತ್ತಿದೆ ಎಂದು ಕೆಂಡಾಮಂಡಲವಾಗಿದ್ದಾರೆ. ಈ ಸಚಿವ ಸಂಪುಟದಲ್ಲಿ ಗಾಡ್ ಫಾದರ್ ಇದ್ದವರಿಗೆ ಅವಕಾಶವಿದೆ. ನನಗೆ ಯಾವ ಗಾಡ್ ಫಾದರ್ ಇಲ್ಲ ಹೀಗಾಗಿ ಅವಕಾಶ ಸಿಕ್ಕಿಲ್ಲ. ಶಾಸಕಾಂಗ ಸಭೆಯಲ್ಲಿ ನಾನು ಇದನ್ನು ಪ್ರಶ್ನೆ ಮಾಡುತ್ತೇನೆ. ಒಬ್ಬೊಬ್ಬರಿಗೆ ಮೂರ್ನಾಲ್ಕು ಬಾರಿ ಮಂತ್ರಿ ಮಾಡಿದ್ದಾರೆ. ಮೂರ್ನಾಲ್ಕು ಬಾರಿ ಅಧಿಕಾರ ಅನುಭವಿಸಿದವರಿಗೆ ಏನ್ ಹೇಳೋದು ಎಂದು ತೇರದಾಳ ಶಾಸಕ ಸಿದ್ದು ಸವದಿ ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ