Breaking News

ಕೊರೋನಾದಿಂದ ಪಾರಾದವರಿಗೆ ಶುಗರ್, ಗುಣಮುಖರಾದ ಶೇ. 14.46 ರಷ್ಟು ಮಂದಿಗೆ ಡಯಾಬಿಟಿಸ್

Spread the love

ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ಮಧುಮೇಹ ಕಾಡತೊಡಗಿದೆ. ಸೋಂಕಿನಿಂದ ಪಾರಾದವರಲ್ಲಿ ಶೇಕಡ 14.46 ರಷ್ಟು ಜನರಿಗೆ ಡಯಾಬಿಟಿಸ್ -2 ಕಾಣಿಸಿಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಇಂಟರ್ ನ್ಯಾಷನಲ್ ಡಯಾಬಿಟಿಕ್ ಫೆಡರೇಶನ್(IDF) ನೀಡಿದ ವರದಿಯಲ್ಲಿ ಹೇಳಲಾಗಿದೆ.

ಕೊರೋನಾಗೆ ಚಿಕಿತ್ಸೆ ಪಡೆದು ಗುಣಮುಖರಾದವರ ಪೈಕಿ ಶೇಕಡ 14.46 ರಷ್ಟು ಮಂದಿಗೆ ಡಯಾಬಿಟಿಸ್ -2 ಕಾಣಿಸಿಕೊಂಡಿದೆ. ಕೊರೋನಾ ಸೋಂಕಿನಿಂದ ಶ್ವಾಸಕೋಶ ಮತ್ತು ಕಿಡ್ನಿಯ ಮೇಲೆ ಹೆಚ್ಚಿನ ಪರಿಣಾಮ ಉಂಟಾಗುತ್ತದೆ ಎನ್ನುವುದು ಸಂಶೋಧನೆಯಲ್ಲಿ ಗೊತ್ತಾಗಿದೆ.

ರೋಗನಿರೋಧಕ ಶಕ್ತಿ ದೇಹದಲ್ಲಿ ಕೊರೋನಾ ಸೋಂಕಿನ ವಿರುದ್ಧ ಹೋರಾಟದೊಂದಿಗೆ ರಕ್ತದಲ್ಲಿ ಸಕ್ಕರೆ ಅಂಶವನ್ನು ಕಡಿಮೆ ಮಾಡಿ ಯಕೃತ್ ಗೆ ಕೂಡ ಪೆಟ್ಟು ನೀಡುತ್ತಿದೆ. ಇದರಿಂದಾಗಿ ಸೋಂಕಿನಿಂದ ಗುಣಮುಖರಾದವರಲ್ಲಿ ಡಯಾಬಿಟಿಸ್ -2 ಕಾಣಿಸಿಕೊಂಡಿದೆ ಎನ್ನುವುದು ಗೊತ್ತಾಗಿದೆ.

ಕೊರೊನಾ ಸೋಂಕು ತಗುಲಿದವರಲ್ಲಿ ಯಕೃತ್ತಿನ ಬೀಟಾ ಸೆಲ್ಸ್ ಗಳಿಗೆ ಹಾನಿಯಾಗುತ್ತದೆ. ಇದರ ಪರಿಣಾಮದಿಂದ ಯಕೃತ್ ಕಾರ್ಯಚಟುವಟಿಕೆ ಕುಂಠತವಾಗುತ್ತದೆ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ