Breaking News

ಮತ್ತೆ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು

Spread the love

ಬೆಂಗಳೂರು:  ವರ್ಷ ಕೊರೋನಾ ಭೀತಿಯ ನಡುವೆಯೂ ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿತ್ತು. ಪರೀಕ್ಷೆಯನ್ನು ಯಶಸ್ವಿಯಾಗಿಯೂ ನಡೆಸಿತ್ತು. ಆದರೆ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷದ ಫಲಿತಾಂಶ ಕಡಿಮೆಯಾಗಿದೆ. 
ಕಳೆದ ವರ್ಷ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಶೇ.73.70ರಷ್ಟು ಫಲಿತಾಂಶ ಬಂದಿತ್ತು. ಆದರೆ, ಈ ವರ್ಷ ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಹೆದರಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಆಗಮಿಸಿರಲಿಲ್ಲ. ಅಲ್ಲದೆ, ಕೆಲವು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆಗೆ ಒಳಗಾಗಿದ್ದಾರೆ. ಪರಿಣಾಮ ಈ ವರ್ಷದ ಫಲಿತಾಂಶ ಶೇ.71.80ರಷ್ಟು ಬಂದಿದೆ.
ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 5,82,316 ವಿದ್ಯಾರ್ಥಿಗಳು ಪಾಸ್‌ ಆಗಿದ್ದರೆ, 2,28,734 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.  ರಾಜ್ಯದ ಸರ್ಕಾರಿ ಶಾಲೆಗಳು ಈ ವರ್ಷ ಶೇ.72.79 ರಷ್ಟು ಫಲಿತಾಂಶ ನೀಡಿವೆ.
ಇನ್ನೂ ಎಂದಿನಂತೆ ಈ ಈ ವರ್ಷವೂ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯದಲ್ಲಿ ಶೇ.77.74 ರಷ್ಟು ವಿದ್ಯಾರ್ಥಿನಿಯರು ಪಾಸ್‌ ಆಗಿದ್ದರೆ, ಶೇ. 66.41 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ.

Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ