Breaking News

ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ `ED’ ದಾಳಿ ಅಂತ್ಯ : ದಾಳಿ ಬಗ್ಗೆ ಕೈ ಶಾಸಕ ಹೇಳಿದ್ದೇನು?

Spread the love

ಬೆಂಗಳೂರು : ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ ಅಂತ್ಯವಾಗಿದ್ದು, ಇಡಿ ದಾಳಿ ಕುರಿತಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್ ಖಾನ್, ನನ್ನ ಮನೆ ವಿಚಾರವಾಗಿ ಯಾರೋ ದೂರು ಕೊಟ್ಟಿದ್ದಾರಂತೆ ಹೀಗಾಗಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾನು ನೀಡಿದ ದಾಖಲೆಗಳು ಸರಿಯಿದ್ದ ಕಾರಣ ನನ್ನ ಮನೆಯಿಂದ ಇಡಿ ಅಧಿಕಾರಿಗಳು ವಾಪಸ್ ಆಗಿದ್ದಾರೆ. ನಾವು ಟ್ರಾವೆಲ್ ಏಜೆನ್ಸಿಯನ್ನು ನಡೆಸುತ್ತೇವೆ. ಇಡಿ ಅಧಿಕಾರಿಗಳು ಅದರ ಮೇಲೂ ದಾಳಿ ನಡೆಸಿದ್ದಾರೆ. ಅಲ್ಲೂ ಅವರಿಗೆ ಏನೂ ಸಿಕ್ಕಿಲ್ಲ.

ನಿನ್ನೆ ಬೆಳಗ್ಗೆ 7.30 ಕ್ಕೆ ನನ್ನ ಮನೆ ವಿಚಾರಕ್ಕೆ ಇಡಿ ದಾಳಿ ನಡೆಸಿದ್ರು. ನನ್ನ ಮನೆ , ನನ್ನ ಸಹೋದರನ ಮನೆಯಲ್ಲಿ ಪರಿಸೀಲನೆ ಮನೆಗೆ ಜಾಗ ಖರೀದಿಸುವಾಗ, ಮನೆ ನಿರ್ಮಾಣಕ್ಕೆ ಎಷ್ಟು ಖರ್ಚಾಗಿದೆ ಈ ಬ್ಗೆ ಪರಿಶೀಲನೆ ಮಾಡಿದ್ದಾರೆ. ಇಡಿ ಅಧಿಕಾಗಳಿಗೆ ಈ ಬಗ್ಗೆ ಎಲ್ಲಾ ಮಾಹಿತಿ ಕೊಟ್ಟಿದ್ದೇನೆ. ಇಡಿಯವರು ಬ್ಯಾಂಕ್ ನಿಂದ ಮಾಹಿತಿ ಪಡಿದ್ದಾರೆ ನನಗೆ ಯಾವುದೇ ನೋಟಿಸ್ ಕೊಟ್ಟಿ. ವಿಚಾರಣೆಗೆ ಕರೆದಾಗ ಬರಬೇಕು ಎಂದು ಹೇಳಿದ್ದಾರೆ ಎಂದರು.

ಇನ್ನು ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಇಡಿ ದಾಳಿ ಮಾಡಲಾಗಿದೆ. ಇಡಿ ದಾಳಿ ರಾಜಕೀಯ ಪ್ರೇರಿತ, ಇಡಿ ದಾಳಿ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇದು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ. ರಾಜಕೀಯದಲ್ಲಿ ವಿರೋಧಿಗಳು ಇರುವುದು ನಿಜ. ಹೀಗಾಗಿ ಬಿಜೆಪಿ ಸರ್ಕಾರದಿಂದ ಇಡಿ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ