ಬೆಂಗಳೂರು – ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ಕೊರೋನಾ ಕರ್ಫ್ಯೂ ಜಾರಿಯಾಗಲಿದ್ದು, ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಇರಲಿದೆ.
ಮಹಾರಾಷ್ಟ್ರ ಮತ್ತು ಕೇರಳ ಗಡಿ ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ತಜ್ಞರ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರಲಿದೆ.
ಗಡಿ ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಕೂಡ ಹಾಕಲು ನಿರ್ಧರಿಸಲಾಗಿದೆ.
ಬೆಳಗಾವಿ, ವಿಜಯಪುರ, ಬಾಗಲಕೋಟೆ, ದಕ್ಷಿಣ ಕನ್ನಡ, ಬೀದರ್, ಕಲಬುರಗಿಗಳಲ್ಲಿ ನೈಟ್ ಮತ್ತು ವೀಕ್ ಎಂಡ್ ಎರಡೂ ಕರ್ಫ್ಯೂ ಜಾರಿಯಾಗಲಿದೆ.
ಆದರೆ ಈ ಬಾರಿಯ ವೀಕ್ ಎಂಡ್ ಕರ್ಫ್ಯೂ ಯಾವ ರೀತಿ ಇರಲಿದೆ ಎನ್ನುವುದು ಇನ್ನಷ್ಟೆ ಗೊತ್ತಾಗಬೇಕಿದೆ. ಶನಿವಾರ ಮತ್ತು ಭಾನುವಾರ ದಿನಸಿ, ತರಕಾರಿಗಳು ಸಿಗಲಿದೆಯೇ ಎನ್ನುವುದು ಗೊತ್ತಾಗಿಲ್ಲ. ಯಾವುದಕ್ಕೆಲ್ಲ ಅವಕಾಶವಿದೆ? ಬಸ್ ಓಡಾಟ ಇರಲಿದೆಯೇ? ಸರಕಾರಿ ಕಚೇರಿಗಳು ಇರಲಿವೆಯೇ? ಎನ್ನುವುದು ಗೊತ್ತಾಗಬೇಕಿದೆ.