Breaking News

ಮಹಿಳಾ ಮತ್ತು ಮಕ್ಕಳ ಖಾತೆ ಕೊಡದೆ ಡಿಮೋಷನ್ ಮಾಡಿದ್ದಾರೆ ಅನ್ನಿಸುದಿಲ್ಲವೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಸಮರ್ಪಕ ಉತ್ತರ ನೀಡದ ಸಚಿವೆ ಹಾಗೇನೂ ಇಲ್ಲ ಎಂದು ಜಾರಿಕೊಂಡರು.

Spread the love

ಮುದ್ದೇಬಿಹಾಳ: ಮುಖ್ಯಮಂತ್ರಿಗಳು ಕೊಟ್ಟಿರುವ ಹಜ್ ಮತ್ತು ವಕ್ಫ್ ಇಲಾಖೆ ಸಚಿವ ಸ್ಥಾನ ತೃಪ್ತಿ ನೀಡಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಮುದ್ದೇಬಿಹಾಳದಲ್ಲಿ ಪ್ರವಾಹ ನಂತರದ ಪರಿಸ್ಥಿತಿ ವೀಕ್ಷಣೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನಗೆ ಯಾವ ಖಾತೆ ಕೊಟ್ಟರೂ ನಿಭಾಯಿಸುವ ಸಾಮರ್ಥ್ಯ ಇದೆ ಎಂದರು.

ನಿಮಗೆ ಮಹಿಳಾ ಮತ್ತು ಮಕ್ಕಳ ಖಾತೆ ಕೊಡದೆ ಡಿಮೋಷನ್ ಮಾಡಿದ್ದಾರೆ ಅನ್ನಿಸುದಿಲ್ಲವೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಸಮರ್ಪಕ ಉತ್ತರ ನೀಡದ ಸಚಿವೆ ಹಾಗೇನೂ ಇಲ್ಲ ಎಂದು ಜಾರಿಕೊಂಡರು. ಸ್ಥಳೀಯ ಶಾಸಕ ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ,ಬಿಜೆಪಿ ಧುರೀಣರು ಇದ್ದರು.


Spread the love

About Laxminews 24x7

Check Also

ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ

Spread the love ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ ಟಿಪ್ಪರ ಹಾಗೂ ಬೈಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ