Breaking News
Home / ಜಿಲ್ಲೆ / ಉಡುಪಿ / ಉಡುಪಿಯಲ್ಲಿ ನಾಳೆ ಕೃಷ್ಣಜನ್ಮಾಷ್ಟಮಿ ಆಚರಣೆ ಇಲ್ಲ

ಉಡುಪಿಯಲ್ಲಿ ನಾಳೆ ಕೃಷ್ಣಜನ್ಮಾಷ್ಟಮಿ ಆಚರಣೆ ಇಲ್ಲ

Spread the love

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಾಳೆ ಅಷ್ಟಮಿ ಆಚರಣೆ ನಡೆಯುತ್ತಿಲ್ಲ. ಸೆಪ್ಟೆಂಬರ್ 11ಕ್ಕೆ ಶ್ರೀಕೃಷ್ಣಜನ್ಮಾಷ್ಟಮಿ ಆಚರಿಸಲು ಉಡುಪಿ ಕೃಷ್ಣಮಠ ತೀರ್ಮಾನಿಸಿದೆ.

ಚಾಂದ್ರಮಾನ ಪದ್ಧತಿಯ ಪ್ರಕಾರ ನಾಳೆ ಅಷ್ಟಮಿ ನಾಡಿನಾದ್ಯಂತ ನಡೆಯುತ್ತಿದೆ. ಉಡುಪಿ ಶ್ರೀಕೃಷ್ಣಮಠ ಸೌರಮಾನ ಪದ್ಧತಿಯನ್ನು ಅನುಸರಿಸುವ ಧಾರ್ಮಿಕ ಕೇಂದ್ರ. ಅಗಸ್ಟ್ 11ಕ್ಕೆ ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯುತ್ತಿದ್ದು, ಕೃಷ್ಣನ ನಾಡು ಉಡುಪಿಯಲ್ಲಿ ಒಂದು ತಿಂಗಳು ನಂತರ ಆಚರಣೆ ನಡೆಯಲಿದೆ. ಶ್ರೀಕೃಷ್ಣ ಹುಟ್ಟಿದ್ದು, ಸಿಂಹಮಾಸ ಕೃಷ್ಣ ಪಕ್ಷ ರೋಹಿಣಿ ನಕ್ಷತ್ರ ಮೂಡುವ ಚಂದ್ರ ಉದಯದ ಕಾಲದಲ್ಲಿ. ಈ ತಿಂಗಳಲ್ಲಿ ನಾಳೆ ತಾರಾನುಕೂಲ ಇಲ್ಲದ ಕಾರಣ ಉಡುಪಿಯಲ್ಲಿ ಅಷ್ಟಮಿ ಆಚರಣೆ ನಡೆಸುತ್ತಿಲ್ಲ.

ಕೊರೊನಾ ಲಾಕ್‍ಡೌನ್ ನಂತರ ಉಡುಪಿ ಕೃಷ್ಣಮಠ ಭಕ್ತರಿಗೆ ಇನ್ನು ತೆರೆದುಕೊಂಡಿಲ್ಲ. ಸೆಪ್ಟೆಂಬರ್ ತಿಂಗಳ ನಂತರ ಪರಿಸ್ಥಿತಿಗಳನ್ನು ನೋಡಿಕೊಂಡು ಅಷ್ಟಮಿ ಆಚರಣೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಪರ್ಯಾಯ ಅದಮಾರು ಮಠ ಮಾಹಿತಿ ನೀಡಿದೆ.

 


Spread the love

About Laxminews 24x7

Check Also

ಬಾಲಕಿಗೆ ಪ್ರೀತಿಸುವಂತೆ ಕಿರುಕುಳ : ಮೆಸ್ಕಾಂ ಸಿಬ್ಬಂದಿ ಪೊಲೀಸರ ವಶಕ್ಕೆ

Spread the loveಪುತ್ತೂರು(ಡಿಸೆಂಬರ್​. 22): ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಸವಣೂರು ಸಮೀಪದ‌ ನಿವಾಸಿಯಾಗಿರುವ ಪಿಯುಸಿ ಓದುತ್ತಿರುವ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ