Breaking News
Home / ರಾಜ್ಯ / ಮಂಜು ತಂದೆ-ತಾಯಿ ಬಳಿ ಮದುವೆ ಬಗ್ಗೆ ಮಾತಾಡಿದ್ದೇನೆ’; ಎಲ್ಲರ ಮುಂದೆ ವಿಷಯ ತಿಳಿಸಿದ ದಿವ್ಯಾ ಸುರೇಶ್​

ಮಂಜು ತಂದೆ-ತಾಯಿ ಬಳಿ ಮದುವೆ ಬಗ್ಗೆ ಮಾತಾಡಿದ್ದೇನೆ’; ಎಲ್ಲರ ಮುಂದೆ ವಿಷಯ ತಿಳಿಸಿದ ದಿವ್ಯಾ ಸುರೇಶ್​

Spread the love

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಫಿನಾಲೆಯನ್ನು (Bigg Boss Finale) ಕಿಚ್ಚ ಸುದೀಪ್​ ಅವರು ತುಂಬಾ ಲವಲವಿಕೆಯಿಂದ ನಡೆಸಿಕೊಟ್ಟಿದ್ದಾರೆ. ಯಾರು ವಿನ್ನರ್​ ಎಂಬುದನ್ನು ತಿಳಿಸುವುದರ ಜೊತೆಗೆ ಹಲವು ವಿಚಾರಗಳು ಈ ವೇದಿಕೆಯಲ್ಲಿ ಚರ್ಚೆ ಆಗಿವೆ. ಹತ್ತು ಹಲವು ತಮಾಷೆಯ ಮಾತುಗಳ ಮೂಲಕ ಇಡೀ ವಾತಾವರಣವನ್ನು ಸುದೀಪ್​ ರಂಗಾಗಿಸಿದ್ದಾರೆ. ಈ ವೇಳೆ ಮಂಜು ಪಾವಗಡ ಮತ್ತು ಅರವಿಂದ್​ ಕೆಪಿ ಅವರ ಮದುವೆ ಬಗ್ಗೆ ಒಂದು ಪ್ರಶ್ನೆ ಎದುರಾಯಿತು. ಅದಕ್ಕೆ ಸಂಬಂಧಪಟ್ಟಂತೆ ದಿವ್ಯಾ ಸುರೇಶ್​ (Divya Suresh) ಕೂಡ ತಮ್ಮ ಅಭಿಪ್ರಾಯ ಹೇಳಿಕೊಂಡರು. ಮಂಜು (Manju Pavagada) ಮದುವೆ ಬಗ್ಗೆ ಅವರ ತಂದೆ-ತಾಯಿ ಬಳಿ ದಿವ್ಯಾ ಸುರೇಶ್​ ಮಾತನಾಡಿದ್ದಾರೆ ಎಂಬುದು ಆಗಲೇ ಗೊತ್ತಾಯಿತು.

‘ಅರವಿಂದ್​ಗಿಂತಲೂ ಮೊದಲು ಮಂಜು ಪಾವಗಡ ಮದುವೆ ಆಗುತ್ತಾರೆ. ಹೌದೋ ಅಲ್ಲವೋ’ ಎಂದು ಸುದೀಪ್​ ಪ್ರಶ್ನೆ ಕೇಳಿದರು. ಅದಕ್ಕೆ ಹಲವು ಉತ್ತರಗಳು ಬಂದವು. ‘ಮಂಜು ತುಂಬಾ ಕನಸುಗಳನ್ನು ಕಟ್ಟಿಕೊಂಡಿದ್ದಾರೆ. ಆ ಗುರಿಯನ್ನು ಮುಟ್ಟುವವರೆಗೂ ಅವರು ಮದುವೆ ಆಗುವುದಿಲ್ಲ’ ಎಂದು ಶಂಕರ್​ ಅಶ್ವತ್ಥ್​​ ಹೇಳಿದರು. ಆ ಮಾತಿಗೆ ರಾಜೀವ್​ ಕೂಡ ಧ್ವನಿಗೂಡಿಸಿದರು. ‘ಮಂಜುಗೆ ಈಗಾಗಲೇ ಅವರ ಅಪ್ಪ-ಅಮ್ಮ ಒಂದು ಹುಡುಗಿಯನ್ನು ಫಿಕ್ಸ್​ ಮಾಡಿದ್ದಾರೆ ಅನಿಸುತ್ತದೆ. ಹಾಗಾಗಿ ಮಂಜು ಬೇಗ ಮದುವೆ ಆಗುತ್ತಾರೆ’ ಎಂದು ರಘು ಗೌಡ ಹೇಳಿದರು.

ಈ ವೇಳೆ ದಿವ್ಯಾ ಮಾತು ಗಮನ ಸೆಳೆಯಿತು. ‘ಆಗಲೇ ನಾನು ಮಂಜು ಅವರ ಅಪ್ಪ-ಅಮ್ಮನ ಹತ್ತಿರ ಮದುವೆ ಬಗ್ಗೆ ಮಾತನಾಡುತ್ತಿದ್ದೆ. ಮಂಜು ಮದುವೆ ಯಾವಾಗ ಮಾಡ್ತೀರ ಅಂತ ಕೇಳಿದೆ. ಅವನು ಆಡ್ತಾ ಇರೋದು ನೋಡಿದರೆ ಬಿಗ್​ ಬಾಸ್​ನಿಂದ ಹೊರಬಂದ ತಕ್ಷಣ ಮದುವೆ ಆಗ್ತಾನೆ ಅನಿಸುತ್ತೆ ಅಂದ್ರು. ಮದುವೆ ಆಗ್ಬೇಕು ಅಂತ ಆಗಾಗ ಹೇಳ್ತಾ ಇರೋದರಿಂದ ತಕ್ಷಣ ಮದುವೆ ಆಗಬಹುದು ಎನಿಸುತ್ತದೆ’ ಎಂದು ದಿವ್ಯಾ ಸುರೇಶ್​ ಹೇಳಿದರು.

ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನವೂ ದಿವ್ಯಾ ಸುರೇಶ್​ ಮತ್ತು ಮಂಜು ಪಾವಗಡ ನಡುವೆ ಒಂದು ರೀತಿಯ ಆತ್ಮೀಯತೆ ಇತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಇಬ್ಬರೂ ತುಂಬಾ ಆಪ್ತವಾಗಿ ನಡೆದುಕೊಳ್ಳುತ್ತಿದ್ದರು. ಪರಸ್ಪರ ಹೆಚ್ಚು ಸಮಯ ಜೊತೆಯಾಗಿ ಕಳೆಯುತ್ತಿದ್ದರು. ಅದು ಕೆಲವರಿಂದ ಟೀಕೆಗೂ ಒಳಗಾಯಿತು. ಸೆಕೆಂಡ್​ ಇನ್ನಿಂಗ್ಸ್​ ಮುಗಿಯುವಾಗ ದಿವ್ಯಾ ಅವರು ‘ಮಂಜು ನನ್ನ ಬೆಸ್ಟ್​ ಫ್ರೆಂಡ್​’ ಎಂದು ಹೇಳಿದ್ದು ಮಾತ್ರವಲ್ಲದೇ ಬಿಗ್​ ಬಾಸ್​ ಬಳಿ ಮನವಿ ಮಾಡಿಕೊಂಡು ವಿಶೇಷ ಕೇಕ್​ ತರಿಸಿ ಫ್ರೆಂಡ್​ಶಿಪ್​ ಡೇ ಆಚರಿಸಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ