Breaking News

ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ

Spread the love

ಮೈಸೂರು : ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಸೋಮವಾರ, ಆಗಸ್ಟ್ 9) ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ನಾಡದೇವತೆಯ ದರ್ಶನ ಪಡೆಯಲು ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಪೂರ್ಣ ಕುಂಭ ಸ್ವಾಗತ ಮಾಡಲಾಯಿತು. ತದನಂತರ ದೇವಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರಿನಲ್ಲಿಂದು ಸಿಎಂ ಪ್ರವಾಸ :

ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸಚಿವರುಗಳಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಡಾ. ಕೆ. ಸುಧಾಕರ್, ನಾರಾಯಣಗೌಡ, ಮುನಿರತ್ನ, ಗೋಪಾಲಯ್ಯ ಸಾಥ್ ನೀಡಿದ್ದರು.

ಮುಖ್ಯಮಂತ್ರಿ ಹಾಗೂ ಅವರ ಟೀಮ್ ದೇವಿಯ ಆಶೀರ್ವಾದ ಪಡೆದ ಬಳಿಕ ಕೋವಿಡ್ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಆ ಬಳಿಕ ಮುಖ್ಯಮಂತ್ರಿಗಳು ಸಚಿವರುಗಳೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ