ಬೆಂಗಳೂರು: ಯಡಿಯೂರಪ್ಪ ಒಬ್ಬ ಭ್ರಷ್ಟ ಮುಖ್ಯಮಂತ್ರಿ. ಈಗ ಅವರು ಹೋಗಿ ಬೊಮ್ಮಾಯಿ ಬಂದಿದ್ದಾರೆ. ಇವರು ಯಡಿಯೂರಪ್ಪನವರ ರಬ್ಬರ್ ಸ್ಟ್ಯಾಂಪ್. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಯಡಿಯೂರಪ್ಪನವರ ಪ್ರಾಕ್ಸಿ ಇದ್ದಂಗೆ. ಈಗ ಕಾಲ ಕೂಡಿ ಬಂದಿದೆ. ಹೀಗಾಗಿ ನಾವೆಲ್ಲರೂ ಹೋರಾಟ ಮನೋಭಾವದಿಂದ ಒಟ್ಟಾಗಿ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಬಿಜೆಪಿಯನ್ನು ರಾಜ್ಯದಿಂದ ತೊಲಗಿಸಲು ಸಾಧ್ಯ ಎಂದರು.
Laxmi News 24×7