Breaking News

ತೋಟಗಾರಿಕೆ ಖಾತೆ ತೃಪ್ತಿ ತಂದಿದೆ : ಸಚಿವ ಮುನಿರತ್ನ

Spread the love

ತುಮಕೂರು,ಆ.9-ನನಗೆ ಕೊಟ್ಟಿರಿವ ತೋಟಗಾರಿಕೆ ಖಾತೆ ತೃಪ್ತಿ ತಂದಿದೆ, ಬೇರೆ ಪಕ್ಷದಿಂದ ಬಿಜೆಪಿಗೆ ಬಂದು ಸಚಿವನಾಗಿದ್ದೇನೆ ಎಂದು ಮುನಿರತ್ನ ತಿಳಿಸಿದ್ದಾರೆ. ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಸಿದ್ದಲಿಂಗ ಸ್ವಾಮೀಜಿಗಳ ಆಶಿರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅನ್ಯ ಪಕ್ಷದಿಂದ ಬಿಜೆಪಿಗೆ ಬಂದು ನಂತರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇನೆ.

 

ಪಕ್ಷದ ವರಿಷ್ಠರು ನಮಗೆ ಜವಾಬ್ದಾರಿ ನೀಡಿದ್ದಾ. ಅದನ್ನು ನಿಬಾಯಿಸೋಣ. ಅದನ್ನು ಬಿಟ್ಟು ನನಗೆ ಇಂತಹದ್ದ ಖಾತೆ ಬೇಕು ಎಂದು ಕೇಳ ಬಾರದು ಎಂದಿದ್ದಾರೆ. ಪಕ್ಷ ಏನು ಮಾಡಿದೆ ಅನ್ನುವ ಬದಲು ಪಕ್ಷಕ್ಕೆ ಏನು ಮಾಡಿದ್ದೇವೆ ಎಂಬ ಅತ್ಮಾವಲೋಕನ ಮಾಡಿ ಕೊಳ್ಳಬೇಕು. ಸಿಕ್ಕ ಅವಕಾಶವನ್ನು ಬಳಸಿಕೊಂಡು ಜನರಿಗೆ ಒಳ್ಳೆಯ ಕೆಲಸಗಳನ್ನು ಮಾಡಿ ತೋರಿಸ ಬೇಕು ಎಂದು ಮುನಿರತ್ನ ತಿಳಿಸಿದ್ದಾರೆ. ಶಾಸಕ ಜಿ.ಬಿ.ಜ್ಯೋತಿ ಗಣೇಶ್,ಆರ್. ರಘು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮಂಗಳೂರು ಏರ್ಪೋರ್ಟ್‌ನಲ್ಲಿ ಕೆ.ಸಿ.ವೇಣುಗೋಪಾಲ್ ಎದುರು ಡಿಕೆಶಿ​ ಪರ ಘೋಷಣೆ

Spread the loveಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ