Breaking News
Home / ರಾಜಕೀಯ / ಗೋಕರ್ಣ: ಸಮುದ್ರದಲ್ಲಿ ಈಜಲು ಹೋದ ಯುವಕ ನಾಪತ್ತೆ

ಗೋಕರ್ಣ: ಸಮುದ್ರದಲ್ಲಿ ಈಜಲು ಹೋದ ಯುವಕ ನಾಪತ್ತೆ

Spread the love

ಕಾರವಾರ: ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಸಮುದ್ರದಲ್ಲಿ ಈಜಲು ಹೋಗಿದ್ದ ಯುವಕ ನಾಪತ್ತೆಯಾಗಿದ್ದಾನೆ.

ಬೆಂಗಳೂರು ನಗರದ ಬಿಟಿಎಂ ಲೇಔಟ್ ನಿವಾಸಿ ಅರುಣ ಲಕ್ಕಪ್ಪ (22) ನೀರಿನಲ್ಲಿ ಮುಳಗಿ ನಾಪತ್ತೆಯಾದ ಯುವಕ. ಒಟ್ಟು ಎಂಟು ಜನ ಸ್ನೇಹಿತರೊಂದಿಗೆ ಈತ ಪ್ರವಾಸಕ್ಕಾಗಿ ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದ. ಸ್ಥಳೀಯ ಜನರ ಎಚ್ಚರಿಕೆ ನಡುವೆಯೂ ಎಂಟು ಜನ ಈಜಲು ಸಮುದ್ರಕ್ಕೆ ಇಳಿದಿದ್ದರು.ಅಲೆಯ ಅಬ್ಬರಕ್ಕೆ ಇಬ್ಬರು ಕೊಚ್ಚಿಹೋಗಿದ್ದರು. ಈ ವೇಳೆ ಓರ್ವನನ್ನು ಲೈಫ್ ಗಾರ್ಡ ಹಾಗೂ ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿದೆ. ಸಮುದ್ರಕ್ಕೆ ಇಳಿದಿದ್ದ ಉಳಿದವರು ಈಜಿ ದಡ ಸೇರಿದ್ದಾರೆ. ಆದರೆ ಅಲೆಗಳ ಅಬ್ಬರಕ್ಕೆ ಅರುಣ್ ತೇಲಿ ಹೋಗಿದ್ದಾನೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ