Breaking News

ಗೋಕರ್ಣ: ಸಮುದ್ರದಲ್ಲಿ ಈಜಲು ಹೋದ ಯುವಕ ನಾಪತ್ತೆ

Spread the love

ಕಾರವಾರ: ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಸಮುದ್ರದಲ್ಲಿ ಈಜಲು ಹೋಗಿದ್ದ ಯುವಕ ನಾಪತ್ತೆಯಾಗಿದ್ದಾನೆ.

ಬೆಂಗಳೂರು ನಗರದ ಬಿಟಿಎಂ ಲೇಔಟ್ ನಿವಾಸಿ ಅರುಣ ಲಕ್ಕಪ್ಪ (22) ನೀರಿನಲ್ಲಿ ಮುಳಗಿ ನಾಪತ್ತೆಯಾದ ಯುವಕ. ಒಟ್ಟು ಎಂಟು ಜನ ಸ್ನೇಹಿತರೊಂದಿಗೆ ಈತ ಪ್ರವಾಸಕ್ಕಾಗಿ ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದ. ಸ್ಥಳೀಯ ಜನರ ಎಚ್ಚರಿಕೆ ನಡುವೆಯೂ ಎಂಟು ಜನ ಈಜಲು ಸಮುದ್ರಕ್ಕೆ ಇಳಿದಿದ್ದರು.ಅಲೆಯ ಅಬ್ಬರಕ್ಕೆ ಇಬ್ಬರು ಕೊಚ್ಚಿಹೋಗಿದ್ದರು. ಈ ವೇಳೆ ಓರ್ವನನ್ನು ಲೈಫ್ ಗಾರ್ಡ ಹಾಗೂ ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿದೆ. ಸಮುದ್ರಕ್ಕೆ ಇಳಿದಿದ್ದ ಉಳಿದವರು ಈಜಿ ದಡ ಸೇರಿದ್ದಾರೆ. ಆದರೆ ಅಲೆಗಳ ಅಬ್ಬರಕ್ಕೆ ಅರುಣ್ ತೇಲಿ ಹೋಗಿದ್ದಾನೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ