ಚಿತ್ರದುರ್ಗ: ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ 18ರಿಂದ 20ರಷ್ಟು ಹೆಚ್ಚಿಸುವ ಪ್ರಸ್ತಾವವನ್ನು ಪರಿಶೀಲಿಸುತ್ತಿದ್ದೇನೆ. ಈ ಸಂಬಂಧ ಮಂಗಳವಾರ ಅಧಿಕಾರಿಗಳ ಸಭೆ ಕರೆದಿದ್ದು, ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಜನರಿಗೆ ಹೊರೆಯಾಗಲು ಬಿಡುವುದಿಲ್ಲ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು. ನಗರದಲ್ಲಿ ಕೊವಿಡ್ 3ನೇ ಅಲೆ ತಡೆ ಮತ್ತು ಮಳೆ ಹಾನಿ ಪರಿಹಾರ ಬಗ್ಗೆ ಸೋಮವಾರ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸಾರಿಗೆ ಇಲಾಖೆಯ ಬಗ್ಗೆ ನಾನಿನ್ನೂ ಅಧ್ಯಯನ ಮಾಡುತ್ತಿದ್ದೇನೆ. ಸಾಧಕ-ಬಾಧಕ ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಜನರಿಗೆ ಹೊರೆ ಆಗಲು ಬಿಡುವುದಿಲ್ಲ ಎಂದು ತಿಳಿಸಿದರು. ರಾಜಕೀಯ ಸ್ಥಾನಮಾನ ಏರುಪೇರಾದ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರದ ಭಾಗವಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಸಮಾಧಾನವಿದೆ. ಸಾರಿಗೆ ನಿಗಮಗಳು ಇಲಾಖೆ ನಷ್ಟದಲ್ಲಿವೆ. ಈ ಪರಿಸ್ಥಿತಿಯನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡುತ್ತೇನೆ ಎಂದು ವಿವರಿಸಿದರು.