ಹಳಿಯಾಳ: ಪಟ್ಟಣದ ಬಸ್ ನಿಲ್ದಾಣದ ಪ್ರದೇಶದಲ್ಲಿ ರಸ್ತೆಯುದ್ದಕ್ಕೂ ವ್ಯಾಪಾರಿಗಳು ತಮ್ಮ ಮಳಿಗೆಗಳ ಎದುರು ರಸ್ತೆ ಹಾಗೂ ಗಟಾರ ಅತಿಕ್ರಮಿಸಿ ನಿರ್ಮಿಸಿದ್ದ ಗುಡುಂಗಡಿಗಳ ತೆರವು ಕಾರ್ಯಾಚರಣೆ ಮಂಗಳವಾರ ಪೋಲಿಸ್ ಬಿಗಿ ಬಂದೋಬಸ್ತನಲ್ಲಿ ನಡೆಯಿತು.
ಕೆಎಸ್ ಆರ್ ಟಿಸಿ ಕಂಪೌಂಡ್ಗೆ ತಾಗಿ ನಿರ್ಮಿಸಲಾದ ವ್ಯಾಪಾರ ಮಳಿಗೆಗಳನ್ನು ಪಡೆದ ವ್ಯಾಪಾರಸ್ಥರು ಎದುರಿನ ಚರಂಡಿ ಹಾಗೂ ಫುಟ್ ಪಾತ್ ಅತಿಕ್ರಮಿಸಿಕೊಂಡು ಗೂಡಂಗಡಿಗಳನ್ನು ಇಟ್ಟು ವ್ಯಾಪಾರ ವಹಿವಾಟು ನಡೆಸುತ್ತಿರುವುದರಿಂದ ಸಂಚಾರಕ್ಕೆ ಸಾಕಷ್ಟು ತೊಂದರೆ ಆಗುತ್ತಿದ್ದ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಇಂದು ಪುರಸಭೆ ಹಾಗೂ ಪೊಲೀಸ್ ಇಲಾಖೆಯವರು ಜಂಟಿ ಕಾರ್ಯಾಚರಣೆ ನಡೆಸಿ ಅತಿಕ್ರಮಿಸಿದ ಅಂಗಡಿಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.
Laxmi News 24×7