Breaking News

ಎಣ್ಣೆ ಅಮಲಿನಲ್ಲಿ ಅಧಿಕಾರಿಗಳಿಗೆ ಆವಾಜ್ ಹಾಕಿದ ಯುವಕ

Spread the love

ಯಾದಗಿರಿ: ಎಣ್ಣೆ ಅಮಲಿನಲ್ಲಿ ಯುವಕನೋರ್ವ ಅಧಿಕಾರಿಗಳಿಗೆ ಆವಾಜ್ ಹಾಕಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ನಿವಾಸಿ ಭೀಮರಡ್ಡಿ ಕುರಕುಂದಿ ಎಂಬ ಯುವಕ ಅಧಿಕಾರಿಗಳಿಗೆ ಆವಾಜ್ ಹಾಕಿದ್ದಾನೆ.

ಯಾದಗಿರಿ ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಆದ್ರೆ ನೈಟ್ ಕರ್ಫ್ಯೂ ಉಲ್ಲಂಘಿಸಿ ಡಾಬಾ ತೆರೆದಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಡಾಬಾ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ಮಾಡಿ ದಂಡ ವಿಧಿಸಲು ಮುಂದಾದ ವೇಳೆ ಯುವಕ ಮತ್ತು ಅಧಿಕಾರಿಗಳ ಜೊತೆ ಗಲಾಟೆಯಾಗಿದೆ. ಎಸಿ ಪ್ರಶಾಂತ್, ನಗರಸಭೆ ಆಯುಕ್ತ ಬಿಟಿ ನಾಯಕ್‌ ಹಾಗೂ ತಹಶೀಲ್ದಾರ್ ಜೊತೆ‌ ಯುವಕ ಭೀಮರಡ್ಡಿ ಕುರಕುಂದಿ ಕಿರಿಕ್ ಮಾಡಿಕೊಂಡಿದ್ದಾನೆ. ನಾನು ಯಾರು ಗೊತ್ತಾ ನಿಮಗೆ, ನನ್ನ ಮುಂದೆ ಮಾತಾಡ್ತೀರಾ ಅಂತ ಏರು ಧ್ವನಿಯಲ್ಲಿ ಅಧಿಕಾರಿಗಳಿಗೆ ಆವಾಜ್ ಹಾಕಿದ್ದಾರೆ.

ಎಣ್ಣೆ ಅಮಲಿನಲ್ಲಿ ಅಧಿಕಾರಿಗಳಿಗೆ ಆವಾಜ್ ಹಾಕಿದ ಯುವಕ


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ