Breaking News

ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಜೀವನ ರೂಪಿಸಿಕೊಳ್ಳೋ ಕನಸು ಕಂಡಿದ್ದ ಅಂಗನವಾಡಿ ಶಿಕ್ಷಕಿಯ ಪ್ರೇಮಿ ಹತ್ಯೆ; ಮಾಜಿ ಪತಿ ಸೇರಿ 3 ಅರೆಸ್ಟ್

Spread the love

ರಾಯಚೂರು: ಜಿಲ್ಲೆಯ ಅಂಗನವಾಡಿ ಶಿಕ್ಷಕಿಯ ಲವ್ವಿ ಡವ್ವಿ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ. ಗುಂಡಪ್ಪ, ಮೌನೇಶ ಮತ್ತು ಕನಕಪ್ಪರ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಡಿವೋರ್ಸ್ ನೀಡಿದ್ದ ಪತ್ನಿಯ ಜೊತೆ ಸಂಬಂಧ ಇಟ್ಟುಕೊಂಡಿದ್ದ ಎಂಬ ಕಾರಣಕ್ಕೆ ಗುಂಡಪ್ಪ ಮೌನೇಶನಾಯಕನನ್ನು ಕೊಲೆ ಮಾಡಿದ್ದು ಸದ್ಯ ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಘಟನೆ ಹಿನ್ನೆಲೆ
7 ವರ್ಷಗಳ ಹಿಂದೆ ಗುಂಡಪ್ಪ ವಿಜಯಲಕ್ಷ್ಮೀಯನ್ನ ಮದ್ವೆಯಾಗಿದ್ದ. ಆದ್ರೆ ಸಂಸಾರದಲ್ಲಿ ಸಾಮರಸ್ಯ ಇಲ್ಲದೆ ಗುಂಡಪ್ಪ ಪತ್ನಿಗೆ ಡಿವೋರ್ಸ್ ಕೊಟ್ಟಿದ್ದ. ಬಳಿಕ ವಿಜಯಲಕ್ಷ್ಮೀ ಅದೇ ಗ್ರಾಮದ ಈ ಮೌನೇಶನಾಯಕನ ಪ್ರೀತಿ ಬಲೆಗೆ ಬಿದ್ದಿದ್ಲು. ಕಳೆದ ಮೂರು ವರ್ಷಗಳಿಂದ ಮೌನೇಶ್ ಹಾಗೂ ವಿಜಯಲಕ್ಷ್ಮೀ ಒಂದೇ ಮನೆಯಲ್ಲಿ ಜೀವನ ನಡೆಸ್ತಿದ್ರು. ಆದ್ರೆ ತನ್ನ ಮಾಜಿ ಪತ್ನಿ ಜೊತೆ ಮೌನೇಶ್ ಸಲುಗೆಯಿಂದ ಇದ್ದಿದ್ದಕ್ಕೆ ಗುಂಡಪ್ಪ ಕತ್ತಿ ಮಸೆಯುತ್ತಿದ್ದ. ಅದೇ ಸೇಡು ಇಟ್ಕೊಂಡು ಜುಲೈ 23ರಂದು ರಾಯಚೂರು ಜಿಲ್ಲೆ ಲಿಂಗಸ್ಗೂರು ತಾಲೂಕಿನ ಗುಂತಗೊಳ ಗ್ರಾಮದ ದೇವಸ್ಥಾನದ ಮುಂದೆ ಮೌನೇಶನಾಯಕನನ್ನು ಕೊಲೆ ಮಾಡಿದ್ದ.

ಪ್ರೇಯಸಿಗಾಗಿ ಎಂಗೇಜ್ಮೆಂಟ್ನೂ ಕ್ಯಾನ್ಸಲ್ ಮಾಡಿದ್ದ
ಮೌನೇಶ್ಗೆ ಇನ್ನೂ ಮದುವೆಯಾಗಿರಲಿಲ್ಲ. ಈ ಹಿಂದೆಯೇ ಆಗಿದ್ದ ನಿಶ್ಚಿತ್ತಾರ್ಥವನ್ನ ವಿಜಯಲಕ್ಷ್ಮೀಗಾಗಿ ಕ್ಯಾನ್ಸಲ್ ಮಾಡಿದ್ದ. ಮುಂದಿನ ದಿನಗಳನ್ನ ವಿಜಯಲಕ್ಷ್ಮೀ ಜೊತೆಯಲ್ಲೇ ಇರಲು ನಿರ್ಧರಿಸಿದ್ದ. ನಿತ್ಯ ಆಕೆಯ ಮನೆಗೆ ಹೋಗಿ ಬರುತ್ತಿದ್ದ. ಇದನ್ನ ಗಮನಿಸಿದ್ದ ಗುಂಡಪ್ಪ ಮೌನೇಶ್ ಕಥೆ ಮುಗಿಸೋ ಸ್ಕೆಚ್ ಹಾಕಿದ್ದ. ಅದ್ರಂತೆ ತನ್ನ ಐವರು ಸಹಚರರೊಂದಿಗೆ ಸೇರಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಸದ್ಯ ಈಗ ಲಿಂಗಸ್ಗೂರು ಠಾಣೆ ಪೊಲೀಸರು ಗುಂಡಪ್ಪ ಸೇರಿ ಮೂವರನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ