Breaking News
Home / ಜಿಲ್ಲೆ / ಕೊಪ್ಪಳ / ಮನೆಯಲ್ಲೇ ಪತ್ನಿಯ ಪುತ್ಥಳಿ ಸ್ಥಾಪಿಸಿದ ಉದ್ಯಮಿ

ಮನೆಯಲ್ಲೇ ಪತ್ನಿಯ ಪುತ್ಥಳಿ ಸ್ಥಾಪಿಸಿದ ಉದ್ಯಮಿ

Spread the love

ಕೊಪ್ಪಳ: ಆ ಮಹಿಳೆಗೆ ಹೀಗೆಯೇ ಮನೆಕಟ್ಟಿಸಬೇಕೆಂದು ಕನಸಿತ್ತು. ಮನೆ ನಿರ್ಮಾಣದ ಭೂಮಿ ಪೂಜೆಗೆ ಇದ್ದ ಆಕೆ ಮನೆಯ ಗೃಹ ಪ್ರವೇಶಕ್ಕೆ ಜೀವಂತವಾಗಿದ್ದಿಲ್ಲ. ಆದರೆ ಅದೇ ಮನೆಯಲ್ಲಿ ಜೀವಂತ ಪ್ರತಿಮೆಯಾಗಿದ್ದಳು. ಅರೇ ಇದೇನಪ್ಪ ಜೀವಂತ ಪ್ರತಿಮೆ ಅಂತೀರಾ? ಹಾಗಿದ್ರೆ ಈ ಸ್ಟೋರಿ ಓದಿ.

ಒಂದೆಡೆ ಜೀವಂತ ಇರಬೇಕಾದಾಗಿನ ಫೋಟೋದಲ್ಲಿನ ಮಹಿಳೆ, ಇನ್ನೊಂದೆಡೆ ಮನೆಯಲ್ಲಿ ಜೀವಂತ ಇದ್ದಾರೇನೋ ಎನ್ನುವ ರೀತಿಯಲ್ಲಿ ಪ್ರತಿಮೆಯಾಗಿ ಕುಳಿತಿರುವ ಮಹಿಳೆ. ಮತ್ತೊಂದೆಡೆ ಮನೆಯೊಡತಿ ಜೊತೆ ಕುಳಿತಿರುವ ಪತಿ, ಮಕ್ಕಳು. ಇವೆಲ್ಲ ಕಂಡುಬಂದದ್ದು ಕೊಪ್ಪಳದಲ್ಲಿ. ಹೌದು. ಕೊಪ್ಪಳದ ಸಮೀಪದ ಭಾಗ್ಯನಗರದಲ್ಲಿನ ಉದ್ಯಮಿ ಶ್ರೀನಿವಾಸ್ ಗುಪ್ತಾರ ನೂತನ ಮನೆಯಲ್ಲಿ ವಿಶೇಷವಾದ ಪ್ರತಿಮೆ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಅಷ್ಟಕ್ಕೂ ಈ ಪ್ರತಿಮೆ ಬೇರೆಯಾರದ್ದೂ ಅಲ್ಲ. ಸ್ವತಃ ಶ್ರೀನಿವಾಸ ಗುಪ್ತಾ ಅವರ ಪತ್ನಿ ಕೆವಿಎನ್ ಮಾಧವಿ ಅವರದ್ದು.

ಕೆವಿಎನ್ ಮಾಧವಿ ಅವರಿಗೆ ತಮ್ಮ ಕನಸಿನ ಮನೆಯೊಂದನ್ನು ಕಟ್ಟಬೇಕೆಂದು ಆಸೆ ಇತ್ತು. ಅದರಂತೆ ಅವರು ಮನೆಯ ಭೂಮಿ ಪೂಜೆ ನೆರವೇರಿಸಿ, ಮನೆ ನಿರ್ಮಾಣ ಸಹ ಆರಂಭ ಮಾಡಿದ್ದರು. ಆದರೆ 2017ರ ಜುಲೈ 5 ರಂದು ತಿರುಪತಿಗೆ ಹೋಗುವ ವೇಳೆಯಲ್ಲಿ ಕೋಲಾರದ ಬಳಿ ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಆ ಬಳಿಕ ಮನೆ ನಿರ್ಮಾಣದ ಕೆಲಸವನ್ನು ಶ್ರೀನಿವಾಸ್ ಗುಪ್ತಾ ಅರ್ಧಕ್ಕೆ ನಿಲ್ಲಿಸಿದ್ದರು. ನಂತರ ಮಕ್ಕಳ ಒತ್ತಾಯದ ಮೆರೆಗೆ ಮನೆ ನಿರ್ಮಾಣದ ಕೆಲಸವನ್ನು ಪುನಃ ಆರಂಭ ಮಾಡಿದರು.

ಈ ವೇಳೆಯಲ್ಲಿ ಮನೆಯ ನಿರ್ಮಾಣದ ಬಳಿಕ ಪತ್ನಿಯ ನೆನಪಿಗೆ ಏನಾದರೂ ಇರಲೇಬೇಕೆಂದು ನಿರ್ಧರಿಸಿದರು. ಮನೆಯ ಆರ್ಕಿಟೆಕ್ಟ್ ರಂಘಣ್ಣನವರ್ ಮೇಣದ ಪ್ರತಿಮೆ ಮಾಡಿಸಲು ಸಲಹೆ ನೀಡಿದರು. ಅದರಂತೆ ಬೆಂಗಳೂರಿನ ಶ್ರೀಧರಮೂರ್ತಿ ಅವರ ಗೊಂಬೆ ಮನೆಗೆ ಹೋದರು. ಅಲ್ಲಿ ಅವರು ಮೇಣದ ಪ್ರತಿಮೆ ಬದಲಾಗಿ ಸಿಲಿಕಾನ್ ಪ್ರತಿಮೆ ಮಾಡಿಸಲು ಸಲಹೆ ನೀಡಿದರು. ಅದರಂತೆ ಶ್ರೀಧರಮೂರ್ತಿ ಸಿಲಿಕಾನ್ ಮೆಟಿರಿಯಲ್ ನಲ್ಲಿ ಮಾಧವಿ ಅವರ ಪ್ರತಿಮೆ ಮಾಡಿದರು. ಈ ಹಿನ್ನಲೆಯಲ್ಲಿ ಇದೇ ಅಗಸ್ಟ್ ತಿಂಗಳ 8 ರಂದು ಶ್ರೀನಿವಾಸ್ ಅವರ ನೂತನ ಮನೆಯ ಗೃಹಪ್ರವೇಶವಾಗಿದ್ದ ಆ ಮನೆಯಲ್ಲಿ ತಮ್ಮ ಪತ್ನಿ ಕೆವಿಎನ್ ಮಾಧವಿಯ ಸಿಲಿಕಾನ್ ಪ್ರತಿಮೆಯನ್ನು ಇಟ್ಟಿದ್ದಾರೆ.


Spread the love

About Laxminews 24x7

Check Also

ಆಗಸ್ಟ್​ ತಿಂಗಳೊಳಗೆ ಐದೂ ಗ್ಯಾರಂಟಿ ಯೋಜನೆಗಳನ್ನು ನೂರಕ್ಕೆ ನೂರರಷ್ಟು ಜಾರಿ ಮಾಡುತ್ತೇವೆ ಎಂದು ಸಚಿವ ಶಿವರಾಜ ತಂಗಡಗಿ

Spread the love ಕೊಪ್ಪಳ: ಯುಪಿಎ ಸರ್ಕಾರದ ಅವಧಿಯಲ್ಲಿ ಆಹಾರ ಭದ್ರತೆ ಕಾನೂನು ಜಾರಿಗೆ ತರಲಾಗಿದೆ. ನಾವು ಐದೂ ಗ್ಯಾರಂಟಿಗಳನ್ನು ಯಶಸ್ವಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ