Breaking News

ಡಾ.ರಾಜ್ ಸಮಾಧಿಗೆ ಸಚಿವ ಸುನಿಲ್ ಕುಮಾರ್ ಪುಷ್ಪ ನಮನ

Spread the love

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು ಕನ್ನಡದ ಮೇರುನಟ ಡಾ. ರಾಜಕುಮಾರ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.ನಂತರ ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಅವರ ಸಮಾಧಿಗೂ ಗೌರವಾರ್ಪಣೆ ಮಾಡಿದರು.ಇದೇ ಸಂದರ್ಭದಲ್ಲಿ ಡಾ. ಅಂಬರೀಶ್ ಅವರ ಸಮಾಧಿ ಸ್ಥಳಕ್ಕೆಕೂಡ ಭೇಟಿ ನೀಡಿದ ಸಚಿವ ವಿ ಸುನಿಲ್ ಕುಮಾರ್ ಅಂಬರೀಶ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಡಾ.ರಾಜಕುಮಾರ್ ಕನ್ನಡದ ದಿಗ್ಗಜ ನಟರಲ್ಲಿ ಒಬ್ಬರು .ಕನ್ನಡ ಸಾಂಸ್ಕೃತಿಕ ಶ್ರೀಮಂತಿಕೆಯ ಪ್ರತೀಕವಾದ ಅವರ ಸಮಾಧಿಗೆ ನಮನ ಸಲ್ಲಿಸುವುದರಿಂದ ಕನ್ನಡ ಮತ್ತು ಸಂಸ್ಕೃತಿ ಖಾತೆ ನಿಭಾಯಿಸಲು ಮತ್ತಷ್ಟು ಶಕ್ತಿ ಮತ್ತು ಹುರುಪು ಸಿಗುತ್ತದೆಂಬ ನಂಬಿಕೆ ನನ್ನದು ಎಂದರು.

ಅಂಬರೀಶ್ ಅವರು ಸಹ ಕನ್ನಡದ ಸಾಂಸ್ಕೃತಿಕ ಶ್ರೀಮಂತಿಕೆಗೆ ಕಾರಣವಾದ ನಟ ಅವರಿಗೂ ಸಹ ಗೌರವ ಸಮರ್ಪಣೆ ಮಾಡಿದ್ದು ನನಗೆ ಸಂತಸ ತಂದಿದೆ ಎಂದರು. ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಕಲಾವಿದೆ ಮಾಳವಿಕಾ ಅವಿನಾಶ್ ,ರಂಗಕರ್ಮಿ ಬಿ. ವಿ ರಾಜಾರಾಮ್ ಮತ್ತು ಚಿನ್ನೇ ಗೌಡ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.


Spread the love

About Laxminews 24x7

Check Also

ನೀತಿ ಆಯೋಗದಿಂದ ಕಾಳಗಿಗೆ 2ನೇ ಸ್ಥಾನ, ₹1 ಕೋಟಿ ವಿಶೇಷ ಅನುದಾನ ಘೋಷಣೆ: ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

Spread the loveನೀತಿ ಆಯೋಗದಿಂದ ಕಾಳಗಿಗೆ 2ನೇ ಸ್ಥಾನ, ₹1 ಕೋಟಿ ವಿಶೇಷ ಅನುದಾನ ಘೋಷಣೆ: ಸಚಿವ ಪ್ರಿಯಾಂಕ್ ಖರ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ