Home / ರಾಜ್ಯ / ಮದುಮಗಳ ಕೈ ಹಿಡಿಯಲು ಹೋಗಿ ಹೆಣವಾದ ರೌಡಿ ಶೀಟರ್

ಮದುಮಗಳ ಕೈ ಹಿಡಿಯಲು ಹೋಗಿ ಹೆಣವಾದ ರೌಡಿ ಶೀಟರ್

Spread the love

ಯಾದಗಿರಿ: ಮದುವೆ ಮನೆಗೆ ಹೋಗಿ ಮದುಮಗಳ ಕೈ ಹಿಡಿಯಲು ಮುಂದಾದ ರೌಡಿ ಶೀಟರ್, ಆಕೆಯ ತಂದೆ ಮತ್ತು ಸಹೋದರರಿಂದ ಕೊಲೆಯಾಗಿದ್ದಾನೆ. ಈ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಪರಮೇಶ್ವರಪಲ್ಲಿಯಲ್ಲಿ ನಿನ್ನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮೊಹಮ್ಮದ್ ಹನೀಪ್ (34) ಕೊಲೆಯಾದವನಾಗಿದ್ದು, ಈತ ಚಿನ್ನಕಾರ ಗ್ರಾಮದ ರೌಡಿ ಶೀಟರ್. ಆರೋಪಿಗಳನ್ನು ಮದುಮಗಳ ತಂದೆ ತಂದೆ ರಸೂಲ್ ಮತ್ತು ಮಕ್ಕಳಾದ ಗುಲಾಮ್, ಇರ್ಫಾನ್, ಹಾರೂನ್ ಎಂದು ಗುರುತಿಸಲಾಗಿದೆ.

 

ಸೋಮವಾರ ಮಧ್ಯಾಹ್ನ ಪರಮೇಶ್ವರಪಲ್ಲಿಯ ತನ್ನ ಸಂಬಂಧಿ ರಸೂಲ್ ರ ಮಗಳ ಮದುವೆಗೆ ಹೋಗಿದ್ದ. ಮದುವೆಯಲ್ಲಿ ಅಸಭ್ಯ ವರ್ತನೆ ತೋರಿದ ಮೊಹಮ್ಮದ್, ವೇದಿಕೆ ಮೇಲೇರಿ ಮದುಮಗಳ ಕೈ ಹಿಡಿಯಲು ಮುಂದಾಗಿದ್ದ. ಇದರಿಂದ ಕೋಪಗೊಂಡ ಮದುಮಗಳ ತಂದೆ ಮತ್ತು ಸಹೋದರರು, ಮೊಹಮ್ಮದ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ