Breaking News

ಸರಕಾರದ ವಿರುದ್ಧ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಧರಣಿ

Spread the love

ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಬಿಜೆಪಿಯ ಮೂಡಿಗೆರೆಯ ಶಾಸಕ ಎಂ.ಪಿ. ಕುಮಾರಸ್ವಾಮಿ ವಿಧಾನಸೌಧ ಆವರಣದಲ್ಲಿ ಗುರುವಾರ ಧರಣಿ ನಡೆಸಿದರು.

ಕುಮಾರಸ್ವಾಮಿ ಮಾತನಾಡಿ, ನಮ್ಮ ಧ್ವನಿಗೆ ನಮ್ಮದೇ ಸರಕಾರದಲ್ಲಿ ಯಾಕೋ ಬೆಲೆ ಸಿಗುತ್ತಿಲ್ಲ. ಮೀಸಲು ಕ್ಷೇತ್ರ ಅನ್ನೋ ಕಾರಣಕ್ಕೋ ಏನೋ ಕಡೆಗಣಿಸಲಾಗುತ್ತಿದೆ. ಉಸ್ತುವಾರಿ ಸಚಿವರು ಬರುತ್ತಾರೆ, ಆದರೆ ಏನೂ ಮಾಡುವುದಿಲ್ಲ. ಇವರಿಗೆ ಮಾತಲ್ಲಿ ಹೇಳಿದರೆ ಅರ್ಥವಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಶೋಕ್‌ ಭರವಸೆ :

ಸ್ಥಳಕ್ಕೆ ಆಗಮಿಸಿದ ಅಶೋಕ್‌ ಅವರು, ಅನುದಾನ ಸಮಸ್ಯೆ ಆಗಿದೆ, ಬೆಳೆ ಪರಿಹಾರ ನೀಡುವಂತೆ ಕುಮಾರಸ್ವಾಮಿ ವಿನಂತಿಸಿದ್ದಾರೆ. ಸಿಎಂ ಜತೆ ಮಾತನಾಡಿ ಕೂಡಲೇ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು. ಇದಕ್ಕೊಪ್ಪಿ ಶಾಸಕರು ಧರಣಿಯನ್ನು ಹಿಂಪಡೆದರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ