ಬೆಂಗಳೂರು : ಇಂದಿರಾ ಗಾಂಧಿಯವರ ಬಗ್ಗೆ ವಿವಾದತ್ಮಕ ಹೇಳಿಕೆ ಶಾಸಕ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ನಾಯಕರು ಸಿಡಿದೆದ್ದಿದ್ದಾರೆ.
ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಸಿ.ಟಿ.ರವಿ ಒಣ ಪೌರುಷ ತೋರಿಸುತ್ತಿದ್ದಾರೆ. ಬಿಜೆಪಿಯವಗೆ ಜನರಿಗೆ ಅನುಕೂಲವಾಗುವ ಒಂದೇ ಒಂದು ಯೋಜನೆ ತರುವ ಯೋಗ್ಯತೆಯಿಲ್ಲ. ಸಿ.ಟಿ.ರವಿಯವರಿಗೆ ತಾಕತ್ತಿದ್ದರೆ ಇಂದಿರಾ ಕ್ಯಾಂಟೀನ್ ಮಾದರಿಯಲ್ಲೇ ಇನ್ನೊಂದು ಯೋಜನೆ ಜಾರಿ ಮಾಡಿಸಲಿ. ಆ ಯೋಜನೆಗೆ ‘ಗೋಡ್ಸೆ’ ಹೆಸರನ್ನು ಬೇಕಾದರೂ ಇಟ್ಟುಕೊಳ್ಳಲಿ. ಬೇಡ ಎನ್ನುವವರು ಯಾರು.? ಎಂದು ಟೀಕಿಸಿದ್ದಾರೆ.