Breaking News

ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ನಿರ್ವಾಹಕರೇ ಗಾಂಜಾ ಮಾರಾಟ ಮಾಡುತಿದ್ದ ಪ್ರಕರಣ ಪತ್ತೆ ; ಇಬ್ಬರ ಬಂಧನ

Spread the love

ಬೆಂಗಳೂರು: ಕೆಎಸ್‌ಆರ್​ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಎಂಬುವವರೇ ಬಂಧಿತರು ಬಂಧಿತರಿಂದ 9.800 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಳೆದ ಮೂರು ವರ್ಷಗಳಿಂದ ಕೆಂಗೇರಿ ಬಳಿ ತುರಹಳ್ಳಿ ಅರಣ್ಯ ಪ್ರದೇಶದಲ್ಲಿಯೂ ಗಾಂಜಾ ಮಾರಾಟ ಮಾಡುತ್ತಿದ್ದರು.

ಬಂಧಿತರು ವಿಜಯಪುರ, ಕಲಬುರಗಿಯಿಂದ ಗಾಂಜಾ ತಂದು ಮಾರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಿಎಂಟಿಸಿ ಯಲ್ಲಿ ಚಾಲಕ ಮತ್ತು ನಿರ್ವಾಹಕರಾಗಿ ಕೆಲಸ ಮಾಡ್ತಿದ್ದ ಆರೋಪಿಗಳು. ಸರ್ಕಾರಿ ಬಸ್ ಗಳಲ್ಲಿ ಮುಕ್ತ ಓಡಾಟಕ್ಕೆ ಅವಕಾಶವನ್ನು ಬಂಧಿತರು ದುರ್ಬಳಕೆ ಮಾಡಿ‌ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ