Breaking News
Home / Uncategorized / ಬೊಮ್ಮಾಯಿಯವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆಯ ಸಂದೇಶ

ಬೊಮ್ಮಾಯಿಯವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆಯ ಸಂದೇಶ

Spread the love

ವಿಜಯಪುರ: ಸಾರ್ವಜನಿಕ ಗಣೇಶೋತ್ಸವ ನಿಷೇಧಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಗಣೇಶ ಚತುರ್ಥಿ ಬ್ಯಾನ್ ಮಾಡಿದ್ದರೆ ಓಕೆ. ಆದರೆ ಈ ಬ್ಯಾನ್ ಕೇವಲ ಗಣೇಶ ಚತುರ್ಥಿಗಷ್ಟೇ ಸೀಮಿತವಾದ್ರೆ ಸರಿಯಲ್ಲ. ಅದನ್ನ ನಾನು ವಿರೋಧ ಮಾಡ್ತೇನೆ ಎಂದು  ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ 3 ನೇ ಅಲೆ ಪಕ್ಕಾ ಇದೆ ಅಂತಾ ವರದಿ ಇದೆ. ನಾವು ಜನರ ಪ್ರಾಣದ ಜೊತೆ ಚಲ್ಲಾಟ ಆಡುವುದು ಬೇಡ. ಆದರೆ ಮುಂದೆ ಯಾವುದೇ ಮೊಹರಂ ಬರಲಿ, ಸುಡಗಾಡ ಇರಲಿ ಎಲ್ಲದಕ್ಕೂ ಇಂತಹ ಬ್ಯಾನ್ ಆಗಬೇಕು. ಅವರಿಗೊಂದು ಕಾನೂನು, ನಮಗೊಂದು ಕಾನೂನು ಬೊಮ್ಮಾಯಿ ಸರ್ಕಾರದಲ್ಲಿ ನಡೆಯುವುದಿಲ್ಲ. ಒಂದು ವೇಳೆ ವ್ಯತ್ಯಾಸ ಆದರೆ ಅದನ್ನ ಉಲ್ಲಂಘನೆ ಮಾಡಲು ನಾವು ಸಿದ್ಧರಿದ್ದೇವೆ ಎಂದು ಯತ್ನಾಳ್ ವಾರ್ನ್ ಮಾಡಿದ್ದಾರೆ.


Spread the love

About Laxminews 24x7

Check Also

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ-2 ಪರೀಕ್ಷೆ ಆರಂಭ

Spread the loveರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ-2 ಪರೀಕ್ಷೆ ಆರಂಭ ಬೆಂಗಳೂರು: 2023 -24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -2 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ