Breaking News

ರೋಗಗ್ರಸ್ಥ ನಿಗಮಗಳನ್ನು ಲಾಭದತ್ತ ಕೊಂಡೊಯ್ಯಲು ಸಚಿವ ಮುರುಗೇಶ್‌ ನಿರಾಣಿ ಯೋಜನೆ

Spread the love

ಬೆಂಗಳೂರು: ರೋಗಗ್ರಸ್ಥ ನಿಗಮಗಳಲ್ಲಿ ಬಂಡವಾಳವನ್ನು ಹಿಂತೆಗೆದುಕೊಂಡು ಪುನಶ್ಚೇತನಗೊಳಿಸಿ ಲಾಭದತ್ತ ಕೊಂಡೊಯ್ಯಲು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದರು.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶುಕ್ರವಾರ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಡಿಯಲ್ಲಿ ಮಾತನಾಡಿದ ಅವರು, ಕಲಬುರಗಿಯ ಸಿಮೆಂಟ್ ಕಾರ್ಪೋರೇಷನ್, ಮೈಶುಗರ್, ಮೈಸೂರು ಪೇಪರ್ ಮಿಲ್ಸ್ ಸೇರಿದಂತೆ ಹಲವಾರು ನಿಗಮಗಳು ಮತ್ತು ಸಂಸ್ಥೆಗಳು ನಷ್ಟದ ಹಾದಿಯಲ್ಲಿವೆ. ತಾವು ಎರಡು ದಿನಗಳ ಹಿಂದೆ ದೆಹಲಿಗೆ ಭೇಟಿ ನೀಡಿದ ವೇಳೆ ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ನಡೆಸಿ ಇವುಗಳನ್ನು ಯಾವ ರೀತಿ ಪುನಶ್ಚೇತನ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ಕೈಗಾರಿಕೆಗಳನ್ನು ಮುಚ್ಚಲು ಅವಕಾಶ ನೀಡುವುದಿಲ್ಲ. ಸಾಧ್ಯವಾದಷ್ಟು ಕೈಗಾರಿಕೆಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ರಾಜ್ಯದಲ್ಲಿರುವ ಎಲ್ಲ ನೈಸರ್ಗಿಕ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಂಡು ಕೈಗಾರಿಕಾ ಉದ್ಯೋಗ ಕ್ರಾಂತಿ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಲಿಂಗಾಯತರ ಬಗ್ಗೆ ಅವಹೇಳನಕಾರಿ ಮಾತು: ಕನೇರಿ ಸ್ವಾಮೀಜಿ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

Spread the loveಬೆಂಗಳೂರು, (ಅಕ್ಟೋಬರ್ 31): ಲಿಂಗಾಯತ ಮಠಗಳ ಒಕ್ಕೂಟದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕನೇರಿ ಮಠದ ಕಾಡಸಿದ್ದೇಶ್ವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ