Breaking News

ಎಂ.ಟಿ.ಬಿ, ನಿರಾಣಿ ಸೇರಿ ಬಿಜೆಪಿಯ ಅನೇಕ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಈಶ್ವರ್ ಖಂಡ್ರೆ

Spread the love

ರಾಯಚೂರು: ಎಂ.ಟಿ.ಬಿ ನಾಗರಾಜ್, ನಿರಾಣಿ ಸೇರಿದಂತೆ ಬಿಜೆಪಿಯ ಅನೇಕ ಶಾಸಕರು ಕಾಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಂ.ಟಿ.ಬಿ.ನಾಗರಾಜ್ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಹಾಗೆ ನಿರಾಣಿ ಕೂಡ ಭೇಟಿಯಾಗಿದ್ದಾರೆ. ಇನ್ನೂ ಅನೇಕರು ಪಕ್ಷದ ಸಂಪರ್ಕದಲ್ಲಿದ್ದಾರೆ. ಆದರೆ, ಎಷ್ಟು ಶಾಸಕರು ಎಂದು ಈಗಲೇ ಹೇಳಲಿಕ್ಕಾಗದು ಎಂದರು.

 

ರಾಜ್ಯದಲ್ಲಿ ಸರ್ಕಾರ ಅವಧಿ ಮುಗಿಸುವುದಿಲ್ಲ. ಮಧ್ಯಂತರ ಚುನಾಚಣೆ ಬರುವುದು ನಿಶ್ಚಿತ. ಆದರೆ, ಸರ್ಕಾರ ಪತನಗೊಂಡರೆ ನಾವು ಮಾತ್ರ ಚುನಾವಣೆಗೆ ಹೋಗುತ್ತೇವೆ. ಆ ನಿಟ್ಟಿನಲ್ಲಿ ಈಗಾಗಲೇ ಪಕ್ಷ ಸಂಘಟನೆಗೆ ಮುಂದಾಗಿದ್ದೇವೆ. ಸೆ.17ರಂದು ರಾಯಚೂರಿನಲ್ಲಿ ವಿಭಾಗೀಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯ ಉಸ್ತುವಾರಿ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿ ಅನೇಕ ನಾಯಕರು ಪಾಲ್ಗೊಳ್ಳುವರು ಎಂದು ತಿಳಿಸಿದರು.


Spread the love

About Laxminews 24x7

Check Also

ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Spread the love ರಾಯಚೂರು: 2024ರಲ್ಲಿ ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಮಹಿಳೆ ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ