Breaking News

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ

Spread the love

ಬೆಂಗಳೂರು: ಡೀಸೆಲ್ ದರ, ಕೊರೋನಾದಿಂದ ಆರ್ಥಿಕ ನಷ್ಟ, ಬಿಡಭಾಗಗಳ ದರ ಹೆಚ್ಚಳವಾಗಿದ್ದರಿಂದ ಬಸ್ ಪ್ರಯಾಣ ದರವನ್ನು ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ಪ್ರಯಾಣ ದರ ಏರಿಕೆ ಮಾಡದಿರಲು ಸರ್ಕಾರ ನಿರ್ಧರಿಸಿದೆ.

ಸದ್ಯಕ್ಕೆ ಬಸ್ ದರ ಹೆಚ್ಚಳ ಮಾಡಿ ಜನರಿಗೆ ಮಾಡುವುದಿಲ್ಲವೆಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಇಲಾಖೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಲಾಭದತ್ತ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸಾರಿಗೆ ಇಲಾಖೆ ಈ ಸಾಲಿನಲ್ಲಿ 510.24 ಕೋಟಿ ರೂಪಾಯಿ ನಷ್ಟದಲ್ಲಿದೆ. ರಾಜ್ಯದ ಸುಮಾರು ಶೇಕಡ 70 ರಷ್ಟು ಜನ ಬಸ್ ಗಳ ಮೇಲೆ ಅವಲಂಬಿತರಾಗಿದ್ದಾರೆ. ಪ್ರಯಾಣ ದರ ಹೆಚ್ಚಳ ಮಾಡಿ ಜನರಿಗೆ ಹೊರೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ