ಬಳ್ಳಾರಿ: ನಾನೇನಾದ್ರೂ ಬಿಜೆಪಿಗೆ ಹೋಗಿದ್ರೇ ಈಗ ನಾನು ಮಂತ್ರಿಯಾಗ್ತಿದ್ದೇ, ಬಿಜೆಪಿ ಸರ್ಕಾರ ರಚನೆ ಸಂದರ್ಭದಲ್ಲಿ ನನಗೂ ಬಿಜೆಪಿ ಪಕ್ಷದಿಂದ ಕರೆ ಬಂದಿತ್ತು. ಎಂದು ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ಶಾಸಕ ಎಸ್. ಭೀಮಾನಾಯ್ಕ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ನನಗೂ ಸಚಿವ ಸ್ಥಾನದ ಆಮಿಷ ಒಡ್ಡಿ ಪಕ್ಷ ಸೇರುವಂತೆ ಕರೆ ಬಂದಿತ್ತು, ಆದರೆ ನಾನು ಮಾಜಿ ಸಿಎಂ ಸಿದ್ದರಾಮಯ್ಯನವರ ಮುಖ ನೋಡ್ಕೊಂಡು ಬಿಜೆಪಿಗೆ ಹೋಗಲಿಲ್ಲ ಎಂದಿದ್ದಾರೆ.
2013- 2018ರ ವರೆಗೆ ಜೆಡಿಎಸ್ ಶಾಸಕನಾಗಿದ್ರು ಸಿದ್ದರಾಮಯ್ಯ ಕೇಳಿದಷ್ಟು ಅನುದಾನ ಕೊಟ್ಟಿದ್ರು, ನಮ್ಮನ್ನ ಕಾಂಗ್ರೆಸ್ ಗೆ ಕರೆದುಕೊಂಡು ಬಂದಿದ್ದೇ ಸಿದ್ದರಾಮಯ್ಯ. ಹೀಗಾಗಿ ಬೇರೆಯವರು ಹೋದ್ರು ನನಗೆ ಹೋಗೋ ಮನಸ್ಸಾಗಲಿಲ್ಲ. ಈ ಬಗ್ಗೆ ಕುಟುಂಬದ ಸದಸ್ಯರ ಜೊತೆಗೆ ಸಾಕಷ್ಟು ಚರ್ಚೆ ಮಾಡಿ, ಅವರ ನಾಯಕತ್ವವನ್ನು ಬಿಟ್ಟು ಹೋಗಬಾರದೆಂಬ ತೀರ್ಮಾನಕ್ಕೆ ಬಂದಿದ್ದೆ ಎಂದಿದ್ದಾರೆ.