Breaking News

ಸಚಿವರ ಮೆರವಣಿಗೆ ವೇಳೆ ದುರಂತ; ಪೊಲೀಸ್​ ಸಿಬ್ಬಂದಿ ಕಾಲಿನ ಮೇಲೆ ಹರಿದ ಜೀಪ್​

Spread the love

ಬೆಂಗಳೂರು: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ. ನಾರಾಯಣಸ್ವಾಮಿ ಮೆರವಣಿಗೆ ನಡೆಸುವ ವೇಳೆಯಲ್ಲಿ ಅವಘಡವೊಂದು ಸಂಭವಿಸಿದ್ದು, ಪೊಲೀಸ್​ ಸಿಬ್ಬಂದಿಯ ಕಾಲಿನ ಮೇಲೆ ಜೀಪ್​ ಹರಿದಿದೆ.

 

 

ಇಂದು ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲು ದೆಹಲಿಯಿಂದ, ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಚಿವರು ಆಗಮಿಸಿದ ವೇಳೆ ಅವರನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತಿತ್ತು. ಸಾಕಷ್ಟು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಚಿಕ್ಕಜಾಲ ಪೋಲಿಸ್ ಠಾಣೆಯ ಸಿಬ್ಬಂದಿ ಶಿವಕುಮಾರ್ ಕಾಲಿನ ಮೇಲೆ ಮೆರವಣಿಗೆ ನಡೆಸುತ್ತಿದ್ದ ಜೀಪ್​ನ ಚಕ್ರ ಹರಿದ ಪರಿಣಾಮ ಸಿಬ್ಬಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಇತರೆ ಪೊಲೀಸ್​ ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.


Spread the love

About Laxminews 24x7

Check Also

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾರ್ಚ್ 8. ರಂದು ವಿದ್ಯುತ್ ವ್ಯತ್ಯಯ

Spread the loveಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ