Breaking News

ಕಾರ್ ಮೇಲೆ ಒಂಟಿ ಸಲಗ ದಾಳಿ, ನಾಲ್ವರಿಗೆ ಗಾಯ, ಓರ್ವ ಗಂಭೀರ

Spread the love

ಬೆಂಗಳೂರು: ಮಾರುತಿ ಓಮ್ನಿ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಂಟಿ ಸಲಗ ದಾಳಿಯಿಂದ ಒಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದ ಬಳಿ ಒಂಟಿ ಸಲಗ ದಾಳಿ ನಡೆದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ಒಂಟಿ ಸಲಗ ಪುಂಡಾಟಿಕೆ ಮೆರೆದಿದೆ. ವಿರೂಪಾಕ್ಷ ಎಂಬುವರ ಮನೆಯ ಸಮೀಪ ಕಾಂಪೌಂಡ್ ಬಳಿ ಬಂದವರನ್ನು ಅಟ್ಟಾಡಿಸಿದೆ. ಅತ್ತಿಂದಿತ್ತ ಓಡಾಡುತ್ತ ಕಾಂಪೌಂಡ್ ಒಳಗೆ ನುಗ್ಗಲು ಯತ್ನ ನಡೆಸಿ ಕಾಳುಮೆಣಸಿನ ಬಳ್ಳಿ ಕಿತ್ತುಹಾಕಿದೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ