Breaking News
Home / ರಾಜಕೀಯ / ಪ್ರಯಾಣಿಕರಿಗೆ ನೆಕ್ಲೇಸ್ ಮರಳಿಸಿದ ಸಾರಿಗೆ ಸಿಬ್ಬಂದಿ

ಪ್ರಯಾಣಿಕರಿಗೆ ನೆಕ್ಲೇಸ್ ಮರಳಿಸಿದ ಸಾರಿಗೆ ಸಿಬ್ಬಂದಿ

Spread the love

ಕಲಬುರ್ಗಿ: ವಿಜಯಪುರ ಜಿಲ್ಲೆಯ ಗಬಸಾವಳಗಿ ಗ್ರಾಮದಿಂದ ಕಲಬುರ್ಗಿಗೆ ಬಂದ ಪ್ರಯಾಣಿಕರೊಬ್ಬರು ಚಿನ್ನದ ಸರವಿದ್ದ ಬ್ಯಾಗ್ ಬಿಟ್ಟು ಹೋಗಿದ್ದನ್ನು ಗಮನಿಸಿದ ಸಾರಿಗೆ ಸಂಸ್ಥೆ ಸಿಬ್ಬಂದಿ ಅದನ್ನು ಪ್ರಯಾಣಿಕರಿಗೆ ವಾಪಸ್‌ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ವಿಜಯಪುರದ ಯರಗಲ್ ಗ್ರಾಮದ ಮಹೇಶ ಬಡಿಗೇರ ಅವರು ಭಾನುವಾರ ವಿಜಯಪುರ-ಕಲಬುರ್ಗಿ ಮಧ್ಯೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಬ್ಯಾಗ್ ಬಿಟ್ಟು ಹೋಗಿದ್ದರು. ಬಸ್‌ ಕಾರ್ಯಾಚರಣೆ ಮುಗಿಸಿ ಘಟಕ 1ಕ್ಕೆ ವಾಪಸಾದಾಗ ಚಾಲಕ ರಾಘವೇಂದ್ರ ಹಾಗೂ ನಿರ್ವಾಹಕ ಖಂಡೋಬಾ ಅವರು ಆ ಬ್ಯಾಗನ್ನು ಘಟಕ ವ್ಯವಸ್ಥಾಪಕ ಮಂಜುನಾಥ ಮಾಯಣ್ಣವರ ಅವರಿಗೆ ತಲುಪಿಸಿದ್ದರು. ಅದರಲ್ಲಿ ನಾಲ್ಕು ತೊಲೆ ಚಿನ್ನದ ನೆಕ್ಲೇಸ್ ಇತ್ತು. ಮಹೇಶ ಬಡಿಗೇರ ಅವರು ಈ ಬಗ್ಗೆ ಸಂಸ್ಥೆಯ ಭದ್ರತಾ ಸಿಬ್ಬಂದಿ ಗಮನಕ್ಕೆ ತಂದಿದ್ದರು. ಭದ್ರತಾ ಸಿಬ್ಬಂದಿ ಮಾಯಣ್ಣವರ ಅವರ ಗಮನಕ್ಕೆ ತಂದಾಗ ಚಾಲಕ, ನಿರ್ವಾಹಕರನ್ನು ವಿಚಾರಿಸಿದರು. ಮಹೇಶ ಅವರು ಟಿಕೆಟ್‌ ತೋರಿಸಿದಾಗ ಈ ಚಿನ್ನ ಅವರೇ ಬಿಟ್ಟು ಹೋಗಿದ್ದ ಬ್ಯಾಗ್‌ನಲ್ಲಿ ಸಿಕ್ಕಿತು ಎಂದು ಖಾತ್ರಿಪಡಿಸಿಕೊಂಡು ಚಿನ್ನದ ನೆಕ್ಲೇಸ್ ಮರಳಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ