Breaking News
Home / Uncategorized / ಷ್ಟ್ರಗೀತೆ ಬಗ್ಗೆ ಕಾಮನ್​ ಸೆನ್ಸ್​ ಇಲ್ವಾ?’; ಸುದೀಪ್​ಗೆ ನೆಟ್ಟಿಗನ ನೇರ ಪ್ರಶ್ನೆ: ತಪ್ಪೊಪ್ಪಿಕೊಂಡ ಕಿಚ್ಚನ ಉತ್ತರ ಸೂಪರ್​

ಷ್ಟ್ರಗೀತೆ ಬಗ್ಗೆ ಕಾಮನ್​ ಸೆನ್ಸ್​ ಇಲ್ವಾ?’; ಸುದೀಪ್​ಗೆ ನೆಟ್ಟಿಗನ ನೇರ ಪ್ರಶ್ನೆ: ತಪ್ಪೊಪ್ಪಿಕೊಂಡ ಕಿಚ್ಚನ ಉತ್ತರ ಸೂಪರ್​

Spread the love

ರಾಷ್ಟ್ರಗೀತೆಯನ್ನು 48ರಿಂದ 52 ಸೆಕೆಂಡ್​ ಒಳಗೆ ಹಾಡಬೇಕು. ಆದರೆ ಸುದೀಪ್​ ಅವರು ಅಂದಾಜು 65 ಸೆಕೆಂಡ್​ಗಳಲ್ಲಿ ಹಾಡಿದರು. ಇದನ್ನು ಗಮನಿಸಿದ ನೆಟ್ಟಿಗರೊಬ್ಬರು ಕೊಂಚ ಖಾರವಾಗಿ ಕಮೆಂಟ್​ ಮಾಡಿದ್ದಾರೆ.

ಆ.15ರಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು (75th Independence Day) ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆ (National Anthem) ಹಾಡಿ, ಸಿಹಿ ಹಂಚುವ ಮೂಲಕ ಆಚರಣೆ ಜೋರಾಗಿತ್ತು. ಅನೇಕ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿದ್ದರು. ನಟ ಕಿಚ್ಚ ಸುದೀಪ್​ (Kichcha Sudeep) ಅವರು ರಾಷ್ಟ್ರಗೀತೆ ಹಾಡಿ, ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡರು. ಅದಕ್ಕೆ ಅನೇಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಸುದೀಪ್​ ಅವರು ಭಕ್ತಿ-ಭಾವದಿಂದ ಹಾಡಿದ ಪರಿ ಕಂಡು ಅಭಿಮಾನಿಗಳು ಕೂಡ ಸೆಲ್ಯೂಟ್​ ಮಾಡಿದರು. ಆದರೆ ಕೆಲವರಿಗೆ ಅದರಲ್ಲೊಂದು ತಪ್ಪು ಕಾಣಿಸಿತು!

ರಾಷ್ಟ್ರಗೀತೆಯನ್ನು 48ರಿಂದ 52 ಸೆಕೆಂಡ್​ ಒಳಗೆ ಹಾಡಬೇಕು. ಆದರೆ ಸುದೀಪ್​ ಅವರು ಅಂದಾಜು 65 ಸೆಕೆಂಡ್​ಗಳಲ್ಲಿ ಹಾಡಿದರು. ಇದನ್ನು ಗಮನಿಸಿದ ನೆಟ್ಟಿಗರೊಬ್ಬರು ಕೊಂಚ ಖಾರವಾಗಿ ಕಮೆಂಟ್​ ಮಾಡಿದ್ದಾರೆ. ‘ಸರಿಯಾಗಿ ರಾಷ್ಟ್ರಗೀತೆ ಹಾಡಿ ಸರ್​. ನಿಮ್ಮನ್ನು ತುಂಬಾ ಜನ ಫಾಲೋ ಮಾಡುತ್ತಾರೆ. ನೀವು ಟಾಪ್​ ನಟ ಆಗಿರಬಹುದು. ಆದರೆ 48-52 ಸೆಕೆಂಡ್​ಗಳ ಒಳಗೆ ಹಾಡಬೇಕು ಎನ್ನುವ ಕಾಮನ್​ ಸೆನ್ಸ್​ ಕೂಡ ಇಲ್ವಾ?’ ಎಂಬ ಕಮೆಂಟ್ ಬಂದಿದೆ. ಅದಕ್ಕೆ ಸುದೀಪ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಇದು (ಕಮೆಂಟ್​) ತುಂಬ ಒರಟಾಗಿದೆ. ಆದರೂ ಒಪ್ಪಿಕೊಳ್ಳುತ್ತೇನೆ. ನನ್ನ ದೇಶದ ಮೇಲಿನ ಪ್ರೀತಿಯಿಂದ ಏನು ಅನಿಸಿತೋ ಅದನ್ನು ಮಾಡಿದ್ದೇನೆ. ಜೈ ಹಿಂದ್​’ ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ. ತಪ್ಪು ಒಪ್ಪಿಕೊಂಡ ಅವರ ನಡೆಗೆ ಅನೇಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ‘ಇದು ನಿಮ್ಮ ದೊಡ್ಡ ಗುಣ. ನೀವು ನಿಜವಾದ ಜಂಟಲ್​ಮನ್​’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ.​

 

 

ಸುದೀಪ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆಯಕ್ಟೀವ್​ ಆಗಿರುತ್ತಾರೆ. ಟ್ವಿಟರ್​ನಲ್ಲಿ ಅವರಿಗೆ 25 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​ ಇದ್ದಾರೆ. ಟ್ವೀಟ್​ಗಳ ಮೂಲಕ ಅಭಿಮಾನಿಗಳ ಜೊತೆ ಅವರು ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಾರೆ. ‘ನೆಗೆಟಿವ್​ ಕಮೆಂಟ್​ ಮಾಡುವವರಿಗೆ ಪ್ರತಿಕ್ರಿಯೆ ನೀಡಬೇಡಿ ಸರ್​’ ಎಂದು ಹಲವು ಅಭಿಮಾನಿಗಳು ಕಿಚ್ಚನ ಬಳಿ ಮನವಿ ಮಾಡಿಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಮತ್ತು ‘ಕೋಟಿಗೊಬ್ಬ 3’ ಸಿನಿಮಾಗಳು ಬಿಡುಗಡೆಗೆ ಸಜ್ಜಾಗುತ್ತಿವೆ. ಕೊರೊನಾ ವೈರಸ್​ ಕಾಟ ಕಡಿಮೆ ಆಗಲಿ ಎಂದು ಇಡೀ ಚಿತ್ರರಂಗ ಕಾಯುತ್ತಿದೆ. ಮೂರನೇ ಅಲೆ ಭಯದಿಂದ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಆಗಿದೆ.

 

 


Spread the love

About Laxminews 24x7

Check Also

ಸಾಲಿನಲ್ಲಿ ನಿಂತು ತಮ್ಮ ಹಕ್ಕುನ್ನು ಚಲಾಯಿಸಿದ ಪ್ರಿಯಂಕಾ ಜಾರಕಿಹೊಳಿ

Spread the loveಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಸರದಿ ಸಾಲಿನಲ್ಲಿ ನಿಂತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ