Breaking News

ಸಿಎಂ ಭೇಟಿ ವೇಳೆ ಮೊಬೈಲ್ ನಿಷೇಧ..!

Spread the love

ಬೆಂಗಳೂರು,ಆ.16- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗುವ ಸಾರ್ವಜನಿಕರ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆರ್‍ಟಿನಗರದಲ್ಲಿರುವ ಅವರ ನಿವಾಸದ ಮುಂದೆ ಫಲಕವನ್ನು ಹಾಕಲಾಗಿದ್ದು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವ ಸಾರ್ವಜನಿಕರು ಮೊಬೈಲ್‍ಗಳನ್ನು ಬಳಸಬಾರದೆಂದು ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ.

ಒಂದು ವೇಳೆ ಸಾರ್ವಜನಿಕರು ಮೊಬೈಲ್ ಬಳಕೆ ಮಾಡಿದರೆ ಅಂಥವರಿಗೆ ಭೇಟಿಗೆ ಅವಕಾಶವನ್ನೇ ಕೊಡುವುದಿಲ್ಲ ಎಂದು ಎಚ್ಚರಿಸಲಾಗಿದೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವವರು ತಮ್ಮ ಕೆಲಸ ಮುಗಿಸಿಕೊಂಡು ಹೋಗುವ ಬದಲು ಸೆಲ್ಫಿಗೆ ಮುಗಿಬೀಳುವುದು, ಮನೆಯ ಸುತ್ತಮುತ್ತ ಫೋಟೋ ತೆಗೆಯುವುದು ಸೇರಿದಂತೆ ನಾನಾ ರೀತಿಯ ತೊಂದರೆಗಳನ್ನು ನೀಡಿದ್ದರು. ಇದನ್ನು ತಪ್ಪಿಸುವ ಸಲುವಾಗಿಯೇ ಸಾರ್ವಜನಿಕರು ಭೇಟಿಗೆ ಬರುವ ಸಂದರ್ಭದಲ್ಲಿ ಮೊಬೈಲ್ ಬಳಕೆ ಮಾಡಬಾರದೆಂದು ಸೂಚಿಸಲಾಗಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ