Breaking News

ಸಚಿವರ ಸರ್ಕಾರಿ ಕಾರಿನಲ್ಲಿ ಉಲ್ಟಾ ಹಾರಿದ ರಾಷ್ಟ್ರ ಧ್ವಜ

Spread the love

ಬೆಂಗಳೂರು: ಕೇಂದ್ರ ರಾಜ್ಯ ಖಾತೆ ಸಚಿವ ನಾರಾಯಣ ಸ್ವಾಮಿ ಅವರ ಕಾರಿನಲ್ಲಿ ರಾಷ್ಟ್ರ ಧ್ವಜ ತಲೆ ಕೆಳಗಾಗಿ (ಉಲ್ಟಾ) ಹಾರಿದ ಘಟನೆ ನಡೆದಿದೆ.

ಇಲ್ಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಗೂಟದ ಕಾರಿನಲ್ಲಿ ಉಲ್ಟಾ ಧ್ವಜ ಹಾರಾಡಿದೆ. ಕೇಸರಿ, ಬಿಳಿ, ಹಸಿರು ಬದಲಾಗಿ. ಹಸಿರು, ಬಿಳಿ, ಕೇಸರಿ ಧ್ವಜ ಹಾರಾಡಿದೆ. ಆದರೆ, ಈ ಯಡವಟ್ಟು ನಡೆದ ವೇಳೆ ಸಚಿವರು ಆ ಕಾರಿನಲ್ಲಿ ಇರಲಿಲ್ಲ. ಖಾಸಗಿ ಕಾರಿನಲ್ಲಿ ಸಚಿವ ನಾರಾಯಣ ಸ್ವಾಮಿ ಆಗಮಿಸಿದರು. ಸಚಿವರು ಪ್ರಯಾಣಿಸಿದ ವಾಹನ ಹಿಂದೆ ಬಂದ ಸರ್ಕಾರಿ ಕಾರಿನಲ್ಲೇ ಧ್ವಜದ ಎಡವಟ್ಟು ನಡೆದಿದೆ.

ಧ್ವಜ ಸರಿಪಡಿಸಿದ ಬಳಿಕ ಸರ್ಕಾರಿ ಕಾರಿನಲ್ಲಿ ನಾರಾಯಣ ಸ್ವಾಮಿ ಪ್ರಯಾಣ ಬೆಳೆಸಿದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ