Breaking News

ಸುಸೈಡ್‌ ನೋಟ್‌ ಬರೆದು ನಾಪತ್ತೆ ಆದ ಕುಟುಂಬ

Spread the love

ಬೆಂಗಳೂರು ;ಕೋವಿಡ್​ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಜೀವನ ನಿರ್ವಹಣೆ ಬಲು ಕಷ್ಟವಾಗಿದೆ. ಇದರ ಜೊತೆ ಅವಮಾನಗಳು ಇನ್ನಷ್ಟು ಬರೆ ಎಳೆದಿದ್ದು, ಬದುಕಲು ಆಗದು ಎಂದು ಕುಟುಂಬವೊಂದು ಸೂಸೈಡ್​ ನೋಟ್​ ಬರೆದು ನಾಪತ್ತೆಯಾಗಿರುವ ಪ್ರಕರಣ ಬಾಗಲಗುಂಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕುಟುಂಬದ ಹುಡುಕಾಟಕ್ಕೆ ಮುಂದಾಗಿದ್ದಾರೆ.

ಗಾಂಧಿ ಎಂಬ 43 ವರ್ಷದ ವ್ಯಕ್ತಿ ಟಿ ದಾಸರಹಳ್ಳಿಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವರ ಹೆಂಡತಿ ಶಾಲಿನಿ ಕಂಪ್ಯೂಟರ್​ ಆಪರೇಟರ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ನೆಮ್ಮದಿಯ ಜೀವನ ನಡೆಸುತ್ತಿದ್ದರು. ಆದರೆ, ಕೋವಿಡ್​ನಿಂದ ಆರ್ಥಿಕ ಮುಗ್ಗಟ್ಟು ಎದುರಾಗಿದ್ದು, ಸಾಲದ ಹೊರೆ ಹೆಚ್ಚಿತ್ತು. ನಿತ್ಯ ಸಾಲಗಾರರು ಮನೆ ಮುಂದೆ ಬಂದು ಒತ್ತಡ ಹೇರಲು ಶುರು ಮಾಡಿದರು. ಏಕಾಏಕಿ ಏಳು ಲಕ್ಷ ಹಣ ತರುವುದು ದುಸ್ತರವಾಗಿತ್ತು. ಈ ಎಲ್ಲಾ ಕಾರಣದಿಂದ ಬೆಸತ್ತ ಕುಟುಂಬ ಮನೆಯಲ್ಲಿ ಸೂಸೈಡ್​ ನೋಟ್​ ಬರೆದುಟ್ಟು ನಾಪತ್ತೆಯಾಗಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ