Breaking News

ಅಫ್ಘಾನ್ ಪ್ರಜೆಗಳಿಗೆ ಭಯ ಬೇಡ: ಅರಗ ಜ್ಞಾನೇಂದ್ರ

Spread the love

ಬೆಂಗಳೂರು: ರಾಜ್ಯದಲ್ಲಿ 339 ಮಂದಿ ಅಫ್ಘಾನಿಸ್ತಾನದ ಪ್ರಜೆಗಳಿದ್ದಾರೆ. ಈ ಪೈಕಿ 192 ಮಂದಿ ವಿದ್ಯಾರ್ಥಿಗಳಿದ್ದಾರೆ. ಅಫ್ಘಾನ್ ಘಟನೆ ಸಂಬಂಧ ಯಾರು ಭಯ ಪಡುವ ಅಗತ್ಯವಿಲ್ಲ. ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರ ನೆರವಿಗೆ ಬರಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಸಿಎಆರ್‌ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ನಗರ ಪೊಲೀಸರು ಪತ್ತೆ ಮಾಡಿದ 36 ಕೋಟಿ ರೂ. ಮೌಲ್ಯದ ಕಳವು ಮಾಲುಗಳ ಪ್ರದರ್ಶನ ಮತ್ತು ಮಾಲೀಕರಿಗೆ ಹಿಂದಿರುಗಿಸುವ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೆಲವು ವಿದ್ಯಾರ್ಥಿಗಳು ಮತ್ತು ಪ್ರಜೆಗಳ ವೀಸಾ, ಪಾಸ್‌ ಪೋರ್ಟ್‌ ಅವಧಿ ಮುಕ್ತಾಯಗೊಂಡಿದೆ. ಇನ್ನು ಕೆಲವರದ್ದು ಮುಕ್ತಾಯದ ಸಮೀಪಿಸುತ್ತಿದೆ. ಅಂತಹವರು ಹೆದರುವ ಅಗತ್ಯವಿಲ್ಲ. ತೊಂದರೆಯಾದರೆ ಕೂಡಲೇ ಸಮೀಪದ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಿ. ರಾಜ್ಯ ಸರ್ಕಾರ ಅಫ್ಘಾನ್ ಪ್ರಜೆಗಳ ನೆರವಿಗೆ ಬರಲಿದೆ. ಇನ್ನು ಪಾಸ್‌ ಪೋರ್ಟ್‌, ವೀಸಾ ಕುರಿತು ಕೇಂದ್ರ ಸರ್ಕಾರದ ಜತೆ ಚರ್ಚಿಸಲಿದೆ ಎಂದು ಹೇಳಿದರು.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ