Breaking News
Home / ಜಿಲ್ಲೆ / ಬೆಂಗಳೂರು / ಲೇಡಿ ಪೊಲೀಸ್​ನಿಂದ ರೇಪ್ ಬೆದರಿಕೆ; ಜನತಾ ದರ್ಶನ ವೇಳೆ ಸಿಎಂ ಮುಂದೆ ಮಹಿಳೆ ಅಳಲು

ಲೇಡಿ ಪೊಲೀಸ್​ನಿಂದ ರೇಪ್ ಬೆದರಿಕೆ; ಜನತಾ ದರ್ಶನ ವೇಳೆ ಸಿಎಂ ಮುಂದೆ ಮಹಿಳೆ ಅಳಲು

Spread the love

ಬೆಂಗಳೂರು, ಆ. 19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜನತಾ ದರ್ಶನ ನಡೆಸಿದ ವೇಳೆ ಮಹಿಳೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗಮನ ಸೆಳೆಯಿತು. ಆರ್ ಟಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೊಮ್ಮಾಯಿ ಅವರು ಜನತಾ ದರ್ಶನ ನಡೆಸಿ ಸಾರ್ವುಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಮಹಿಳೆಯೊಬ್ಬರು ಸಿಎಂಗೆ ಅಹವಾಲು ಸಲ್ಲಿಸಲು ಸಾಕಷ್ಟು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಸಿಎಂ ತಮ್ಮ ಕಾರಿನಲ್ಲಿ ಅಲ್ಲಿಂದ ಹೊರಡತೊಡಗಿದಾಗ ಆ ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು. ಮುಖ ನೋಡಿ ಮಣೆ ಹಾಕಬಾರದು ಎಂದು ಗೊಣಗಿದರು. ಇದನ್ನ ಕೇಳಿಸಿಕೊಂಡ ಸಿಎಂ ಅವರು ಕಾರನ್ನ ನಿಲ್ಲಿಸಿ ಅ ಮಹಿಳೆಯ ಸಮಸ್ಯೆ ಆಲಿಸಿ ಅವರಿಂದ ಅಹವಾಲು ಸ್ವೀಕರಿಸಿದರು.

ಸಿಎಂ ಬಂದು ಕೇಳಿದಾಗ ಆ ಮಹಿಳೆ ತಮಗೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಂದ ಆಗುತ್ತಿರುವ ತೊಂದರೆ ಬಗ್ಗೆ ಹೇಳಿಕೊಂಡರು. ತಮ್ಮ ಪ್ರಕರಣದಲ್ಲಿ ಮಹಿಳಾ ಸಬ್ ಇನ್ಸ್​ಪೆಕ್ಟರ್ ಅವರು ಚಾರ್ಜ್ ಶೀಟ್ ಮುಚ್ಚಿಡುತ್ತಿದ್ದಾರೆ. ಅಲ್ಲದೇ ತನಗೆ ರೇಪ್ ಬೆದರಿಕೆ ಹಾಕುತ್ತಿದ್ದಾರೆ ಎಂದು ಆ ಮಹಿಳೆ ಗಂಭೀರ ಆರೋಪ ಮಾಡಿದರು. ಆ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಕ್ರಮ ಕೈಗೊಂಡು ಸಸ್ಪೆಂಡ್ ಮಾಡಿಸಿ ಎಂದು ಸಿಎಂಗೆ ಒತ್ತಾಯ ಹೇರಿದರು ಆ ಮಹಿಳೆ.

ಮಹಿಳೆಯ ಅಹವಾಲು ಸ್ವೀಕರಿಸಿದ ಸಿಎಂ ಬಸವರಾಜು ಬೊಮ್ಮಾಯಿ, ಈ ಮಹಿಳೆಯ ವಿಚಾರವನ್ನು ಪರಿಶೀಲಿಸಿ ಸೂಕ್ತ ಕ್ರಮಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿ ಎಂದು ತಮ್ಮ ಜೊತೆಯಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿ ಅಲ್ಲಿಂದ ಹೊರಟರು


Spread the love

About Laxminews 24x7

Check Also

ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ

Spread the love ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ