Breaking News
Home / ಜಿಲ್ಲೆ / ರಾಯಚೂರು / ಬಿಜೆಪಿ ಸರ್ಕಾರ ಬಂದ ಮೇಲೆ ಸಾರ್ವಜನಿಕರ ಬದುಕು ದುಸ್ತರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬಿಜೆಪಿ ಸರ್ಕಾರ ಬಂದ ಮೇಲೆ ಸಾರ್ವಜನಿಕರ ಬದುಕು ದುಸ್ತರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Spread the love

ರಾಯಚೂರು : ಕೇಂದ್ರ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಜನಾಶೀರ್ವಾದ ಸಮಾರಂಭವನ್ನು ನಡೆಸುತ್ತಿದ್ದು , ಇದಕ್ಕೂ ಪೂರ್ವದಲ್ಲಿ ಸಾರ್ವಜನಿಕರಿಗೆ ಏನನ್ನು ನೀಡಿ ಆಶೀರ್ವಾದ ಪಡೆಯಲು ಮುಂದಾಗಿರುವುದರ ಬಗ್ಗೆ ಬಿಜೆಪಿಗರು ತಿಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ . ಕೆ . ಶಿವಕುಮಾರ ಲೇವಡಿ ಮಾಡಿದ್ದಾರೆ . ಸ್ಥಳೀಯ ಖಾಸಗಿ ಹೋಟೆಲ್ ‌ ನಲ್ಲಿ ವಿಭಾಗೀಯ ಮಟ್ಟದ ಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿ , ಬಿಜೆಪಿ ಸರ್ಕಾರ ಬಂದ ಮೇಲೆ ಸಾರ್ವಜನಿಕರ ಬದುಕು ದುಸ್ತರಗೊಂಡಿದೆ .

ಕೊರೋನಾ ಸಮಯದಲ್ಲಿ ಜನರಿಗೆ ಔಷಧಿ , ಆಸ್ಪತ್ರೆಗಳಿಗೆ ಬೆಡ್ ‌, ಆಯಂಬುಲೆನ್ಸ್ ‌ ನೀಡಿದ್ದಕ್ಕೆ ಆಶೀರ್ವಾದ ಕೇಳುತ್ತಾರೆಯೇ ? ಬಿಎಸ್ ‌ ವೈರನ್ನು ಯಾಕೆ ತೆಗೆದರು , ಕೇಂದ್ರ ಆರೋಗ್ಯ ಸಚಿವರನ್ನು ಯಾಕೆ ಬದಲಾವಣೆ ಮಾಡಿದರು , ಅಚ್ಚೇದಿನ್ ‌ ಯಾರಿಗೆ ಎಲ್ಲಿ ಬಂದಿದೆ ಇದನ್ನು ಬಿಜೆಪಿಗರು ಹೇಳಬೇಕು . ಅಸಂಘಟಿತರಿಗೆ ಘೋಷಿಸಿದ ಪ್ಯಾಕೇಜ್ ‌ ಏನಾಯಿತು ಎಂಬುದನ್ನು ತಿಳಿಸಬೇಕು , ಕೋವಿಡ್ ‌ ನಿಂದ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿರುವುದರ ಬಗ್ಗೆ ಬಿಜೆಪಿಗರೇ ಬಿಡಿಸಿ ಹೇಳಬೇಕು . ಕೇಂದ್ರ ಸಚಿವರಾಗಿದ್ದೇವೆ ಎಂದು ಆಶೀರ್ವಾದ ಯಾತ್ರೆ ನಡೆಸುತ್ತಿದ್ದು ಅದಕ್ಕೆಲ್ಲಾ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು .


Spread the love

About Laxminews 24x7

Check Also

ಯರಗುಂಟಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

Spread the love ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ 10ಕ್ಕೂ ಜನರು ವಾಂತಿ – ಭೇದಿಯಿಂದ ಅಸ್ವಸ್ಥರಾಗಿದ್ದು, ಪಟ್ಟಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ