Breaking News
Home / ಜಿಲ್ಲೆ / ಬೆಳಗಾವಿ / *ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ, * ಸುವರ್ಣ ಸೌಧ ಆಡಳಿತದ ಶಕ್ತಿ ಕೇಂದ್ರ ಬದ್ಧ.

*ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ, * ಸುವರ್ಣ ಸೌಧ ಆಡಳಿತದ ಶಕ್ತಿ ಕೇಂದ್ರ ಬದ್ಧ.

Spread the love

ಬೆಳಗಾವಿ : ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿಯಲ್ಲಿ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಕೋವಿಡ್-19 ಹಾಗೂ ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಸಭೆ ನಡೆಸಿದರು. ಈ ಸಭೆಯಲ್ಲಿ ಬ್ಲ್ಯಾಕ್ ‌ಫಂಗಸ್ ಸೋಂಕಿತರು ಮನೆಗೆ ತೆರಳಿದ ಬಳಿಕವೂ ವಯಲ್ ಗಳನ್ನು ಪೂರೈಸಲು ಸರಕಾರ ‌ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನ ಸಿಎಂ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ.

* ಕೋವಿಡ್ ನಿರ್ವಹಣೆಗೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆಸ್ಪತ್ರೆ, ಆಕ್ಸಿಜನ್, ಔಷಧಿ ಮತ್ತಿತ್ತರ ವ್ಯವಸ್ಥೆ ಮಾಡಲಾಗಿದೆ. ಗಡಿ‌ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ.

* ಕೋವಿಡ್ ನಿಯಂತ್ರಣದಲ್ಲಿ ಸರಕಾರ ಯಶಸ್ವಿಯಾಗಿದೆ. ಬೆಳಗಾವಿ ಪಾಸಿಟಿವಿಟಿ ದರ ಕಡಿಮೆಯಾಗಿದೆ.

* ಹತ್ತು ಕಡೆ ಆಕ್ಸಿಜನ್ ‌ಉತ್ಪಾದನಾ ಘಟಕ ಸ್ಥಾಪನೆಗೆ ತೀರ್ಮಾನ. ಗೋಕಾಕ, ಚಿಕ್ಕೋಡಿ, ಸವದತ್ತಿ, ಬೆಳಗಾವಿ ಮತ್ತಿತರ ಕಡೆಗಳಲ್ಲಿ ಸ್ಥಾಪಿಸಲಾಗುತ್ತಿದೆ.

* ಇಪ್ಪತ್ತು ದಿನಗಳಲ್ಲಿ ಎಲ್ಲ ಆಕ್ಸಿಜನ್ ಘಟಕಗಳು ಸಿದ್ಧಪಡಿಸಲಾಗುವುದು.

* ಚಿಕ್ಕೋಡಿ ಆರ್.ಟ.-ಪಿಸಿಆರ್ ಪರೀಕ್ಷಾ ಕೇಂದ್ರ ಸ್ಥಾಪನೆ. ಇಂದು ಉದ್ಘಾಟಿಸಲಾಗಿದೆ.

* ಗೋಕಾಕ ಕೋವಿಡ್ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಮಂಜೂರಾತಿ ನೀಡಲಾಗುವುದು.

* ಹೊಸ ಐದು‌ ತಾಲ್ಲೂಕು ಆಸ್ಪತ್ರೆಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗುವುದು.

* ಬೆಳಗಾವಿ ಜಿಲ್ಲೆಗೆ ಪ್ರತಿದಿನ 15 ಸಾವಿರ ಹೆಚ್ಚುವರಿ ಲಸಿಕೆ ಪೂರೈಸಿ ಪ್ರತಿದಿನ 40 ಸಾವಿರ ಲಸಿಕೆ ನೀಡಲು ಕ್ರಮ

* ಕೇಂದ್ರದಿಂದ ಒಂದು ಕೋಟಿ‌ ಲಸಿಕೆಗೆ ಬೇಡಿಕೆ ಸಲ್ಲಿಸಲಾಗಿದೆ.

* ಲಸಿಕಾಕರಣ ಗುರಿಸಾಧನೆಗೆ ಅಗತ್ಯ ಕ್ರಮ.

* ಗಡಿ ಗ್ರಾಮಗಳಿಗೆ ಆದ್ಯತೆ ಮೇರೆಗೆ ಲಸಿಕೆಗೆ ಸೂಚನೆ ನೀಡಲಾಗಿದೆ.
* ಪ್ರತಿ ಗ್ರಾಮ ಗಳಲ್ಲಿ ಮಕ್ಕಳ ಅರೋಗ್ಯ ಶಿಬಿರ ಹಮ್ಮಿಕೊಳ್ಳಲು ಸೂಚನೆ ನೀಡಲಾಗಿದೆ. ‌ಪೌಷ್ಟಿಕಾಹಾರ ಪೂರೈಕೆಗೆ ಕ್ರಮ.

* ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಕ್ರಮ. ಜಿಲ್ಲೆಯಾದ್ಯಂತ ಆರೋಗ್ಯ ಶಿಬಿರ.

* ನೆರೆಹಾನಿ ಸಮೀಕ್ಷೆ ನಡೆದಿದೆ. ಬೆಳೆ ಹಾಗೂ ಮನೆಹಾನಿ ಸಮೀಕ್ಷೆ ಗೊಂದಲ ನಿವಾರಣೆಗೆ ಕ್ರಮ. ಪಂಚಾಯಿತಿ ಮಟ್ಟದಲ್ಲಿ ಮನೆಹಾನಿ ಕುರಿತು ಪಟ್ಟಿ ಪ್ರಕಟ; ಆಕ್ಷೇಪಣೆ ಆಹ್ವಾನ.

* ಕಳೆದ ಬಾರಿ ಪ್ರವಾಹದಿಂದ ಹಾನಿ. ಅಂತಹವರಿಗೂ ಸೂಕ್ತ ಪರಿಹಾರ ಒದಗಿಸಲು ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರತ್ಯೇಕ ಪಟ್ಟಿ ಸಿದ್ಧಪಡಿಸಲು ನಿರ್ದೇಶನ‌ ನೀಡಲಾಗಿದೆ.

* ಸುವರ್ಣ ಸೌಧ ಆಡಳಿತದ ಶಕ್ತಿ ಕೇಂದ್ರ ಬದ್ಧ.

*ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ ನಡೆಸಲು ಕ್ರಮ.

* ಸಕ್ಕರೆ ಆಯುಕ್ತಾಲಯ ಬೆಳಗಾವಿಗೆ ಸ್ಥಳಾಂತರಕ್ಕೆ ಆದೇಶ ನೀಡಲಾಗುವುದು.

* ಮಹತ್ವದ ಸರಕಾರಿ ಕಚೇರಿ ಸುವರ್ಣ ಸೌಧಕ್ಕೆ ಸ್ಥಳಾಂತರಕ್ಕೆ ಅಗತ್ಯ ಕ್ರಮ.

* ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ. ನಿಯಮ‌ ಉಲ್ಲಂಘಿಸಿದರೆ‌ ಅಧಿಕಾರಿಗಳು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ.

* ಬ್ಲ್ಯಾಕ್ ‌ಫಂಗಸ್ ಸೋಂಕಿತರು ಮನೆಗೆ ತೆರಳಿದ ಬಳಿಕವೂ ವಯಲ್ ಗಳನ್ನು ಪೂರೈಸಲು ಸರಕಾರ ‌ನಿರ್ಧಾರ.

* ಬಿಮ್ಸ್ ಮೂಲಸೌಕರ್ಯ ‌ಒದಗಿಸಲು ತಂಡವನ್ನು ಕಳಿಸಲಾಗುವುದು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ