ಮುಂಬೈ: ಕೊರೊನಾದಿಂದಾಗಿ ಭಾರತೀಯ ರೈಲ್ವೆ ಇಲಾಖೆಗೆ 36,000 ಕೋಟಿ ರೂಪಾಯಿ ನಷ್ಟವಾಗಿರುವುದಾಗಿ ರೈಲ್ವೆ ಇಲಾಖೆ ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಹೇಳಿದ್ದಾರೆ.
ಸರಕು ರೈಲುಗಳೇ ನಮಗೆ ನಿಜವಾದ ಆದಾಯ ತಂದು ಕೊಡುತ್ತಿರುವುದು ಎಂದು ಅವರು ತಿಳಿಸಿದ್ದಾರೆ. ಭಾನುವಾರದಂದು ಮಹಾರಾಷ್ಟ್ರದ ಜಲ್ನಾ ರೈಲು ನಿಲ್ದಾಣದ ಅಂಡರ್ ಪಾಸ್ ಗುದ್ದಲಿ ಪೂಜೆ ನೆರವೇರಿಸಿದ ಅವರು, “ಪ್ಯಾಸೆಂಜರ್ ರೈಲುಗಳಿಂದ ಯಾವಾಗಲೂ ಲಾಭ ಸಿಗುವುದಿಲ್ಲ. ಟಿಕೆಟ್ ದರ ಹೆಚ್ಚಿಸಿದರೆ ಜನರಿಗೆ ತೊಂದರೆಯೆಂದು ದರ ಹೆಚ್ಚಳ ಮಾಡಿಲ್ಲ.
ಕೊರೊನಾದಿಂದಾಗಿ ಇಲಾಖೆಗೆ 36,000 ಕೋಟಿ ರೂ. ನಷ್ಟವಾಗಿದೆ. ಆ ಸಮಯದಲ್ಲಿ ಸರಕು ರೈಲುಗಳು ಆದಾಯ ತಂದುಕೊಟ್ಟಿವೆ’ ಎಂದು ರಾವ್ ಸಾಹೇಬ್ ನುಡಿದಿದ್ದಾರೆ.