Breaking News

ಕಾಂಗ್ರೆಸ್‍ನಲ್ಲಿ ಪ್ರಮೋಷನ್ ಸಿಗಬೇಕೆಂದರೆ ಜೈಲಿಗೆ ಹೋಗಬೇಕು: ಸಿ.ಟಿ.ರವಿ ವ್ಯಂಗ್ಯ

Spread the love

ಚಿಕ್ಕಮಗಳೂರು: ಕಾಂಗ್ರೆಸ್‍ನ ಲ್ಲಿ ಪ್ರಮೋಷನ್ ಸಿಗಬೇಕೆಂದರೆ ಭ್ರಷ್ಟಾಚಾರ ಮಾಡಬೇಕು, ಜೈಲಿಗೆ ಹೋಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಈಗ ನಿರಪರಾಧಿಯೂ ಅಲ್ಲ, ಅಪರಾಧಿಯೂ ಅಲ್ಲ, ಅವರು ಆಪಾದಿತ. ಭ್ರಷ್ಟಾಚಾರದ ಕಾಂಗ್ರೆಸ್‍ನ ರಾಜಕೀಯ ವ್ಯವಸ್ಥೆಯ ಒಂದು ಭಾಗ. ಅಲ್ಲಿ ಗುಂಡಾಗಿರಿ ಪ್ರಮೋಷನ್‍ಗೆ ಇರುವ ಒಂದು ಮಾದರಿ ಎಂದರು.

ಡಿಕೆ ಶಿವಕುಮಾರ್ ಅವರು ಬೆಳೆದ ಬಂದ ರೀತಿಯಲ್ಲೇ ಆಲೋಚನೆ ಮಾಡುತ್ತಿದ್ದಾರೆ. ಹಿಂದೆ ರಾಜೀವ್ ಗಾಂಧಿ ಅವರು ತನ್ನ ಮೇಲೆ ಗೂಂಡಾ ಅಂತ ಬಂದಾಗ ಗೂಂಡಾಗಳಿಗೆ ನಾವು ವಿಶೇಷವಾದ ಆದ್ಯತೆ ಕೊಡಬೇಕೆಂದು ಅವರೇ ಹೇಳಿದ್ದಾರೆ. ಅದನ್ನ ಅವರೇ ಒಪ್ಪಿದ್ದಾರೆ, ಮುಂದೆ ಜನ ಕಾಂಗ್ರೆಸ್ ಬಗ್ಗೆ ಎಚ್ಚರ ವಹಿಸಬೇಕಿದೆ. ಉಳಿದವರು ಕಾಂಗ್ರೆಸ್ ಬಗ್ಗೆ ಯೋಚನೆ ಮಾಡಬೇಕಾಗಿದೆ ಎಂದು ಸಿ.ಟಿ.ರವಿ ಹೇಳಿದರು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ