Breaking News

ಕೆಜಿಎಫ್ ಅಧೀರನಿಗೆ ಕ್ಯಾನ್ಸರ್- ಶೀಘ್ರ ಚಿಕಿತ್ಸೆಗೆ ಅಮೆರಿಕಕ್ಕೆ ಹಾರಿದ ಸಂಜಯ್ ದತ್

Spread the love

ಮುಂಬೈ: ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಇದೀಗ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ.ಈ ಸಂಬಂಧ ಪತ್ರಕರ್ತ ಕೋಮಲ್ ನಹ್ತಾ ಅವರು ಟ್ವೀಟ್ ಮಾಡಿ, ಸಂಜಯ್ ದತ್ ಅವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ ಅಂತ ತಿಳಿಸಿದ್ದಾರೆ.

ಇತ್ತ ಸಂಜಯ್ ದತ್ ಟ್ವೀಟ್ ಮಾಡಿ, ಸಿನಿಮಾದಿಂದ ಸಣ್ಣ ಬ್ರೇಕ್ ಪಡೆದುಕೊಳ್ಳುವುದಾಗಿ ತಿಳಿಸಿದ್ದರು. ನನಗೆ ಚಿಕಿತ್ಸೆ ಮಾಡಿಸಿಕೊಳ್ಳಬೇಕಿದ್ದು, ಸ್ನೇಹಿತರು ಕುಟುಂಬಸ್ಥರು ನನ್ನ ಜೊತೆಗಿದ್ದಾರೆ. ಹೀಗಾಗಿ ನನ್ನ ಆತ್ಮೀಯರು ಏನೂ ಯೋಚನೆ ಮಾಡಬೇಡಿ. ಅಲ್ಲದೆ ವದಂತಿಗಳನ್ನು ಕೂಡ ನಂಬಬೇಡಿ. ನಿಮ್ಮೆಲ್ಲರ ಹಾರೈಕೆಯಿಂದ ನಾನು ಅತೀ ಶೀಘ್ರವೇ ಹುಷಾರಾಗಿ ನಿಮ್ಮ ಮುಂದೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ನಟನ ಆಪ್ತರೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ನಟರಿಗೆ ಕ್ಯಾನ್ಸರ್ ತುಂಬಾನೇ ಜೋರಾಗಿದೆ. ಪತ್ನಿ ಹಾಗೂ ಪುಟ್ಟ ಮಕ್ಕಳು ದುಬೈನಲ್ಲಿದ್ದು, ಮಕ್ಕಳ ಬಗ್ಗೆ ನಟ ಚಿಂತೆಗೀಡಾಗಿದ್ದಾರೆ. ಸದ್ಯ ಸಂಜಯ್ ಅವರಿಗೆ ತಕ್ಷಣವೇ ಚಿಕಿತ್ಸೆಯ ಅಗತ್ಯತೆ ಇದೆ. ಹೀಗಾಗಿ ಅವರು ಅಮೆರಿಕಕ್ಕೆ ತೆರಳುತ್ತಾರೆ ಎಂದು ತಿಳಿಸಿದರು.

ಆಗಸ್ಟ್ 8ರಂದು ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡು ನಟ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಇವರ ಕೊರೊನಾ ಪರೀಕ್ಷೆ ನಡೆಸಿದ್ದು, ವರದಿಯಲ್ಲಿ ನೆಗೆಟಿವ್ ಎಂದು ಬಂದಿತ್ತು. ಕೊರೊನಾ ಅಲ್ಲದ ಕಾರಣ ಅವರಿಗೆ ನಾನ್ ಕೋವಿಡ್ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.ಪ್ರಸ್ತುತ ಸಂಜಯ್ ದತ್ ಅವರು ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್: ಚಾಪ್ಟರ್ 2 ನಲ್ಲಿ ಅಧೀರನಾಗಿ ಅಭಿನಯಿಸುತ್ತಿದ್ದು, ಇತ್ತೀಚೆಗಷ್ಟೇ ಇದರ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿತ್ತು.

 


Spread the love

About Laxminews 24x7

Check Also

ಇಂಥ ಒಬ್ಬ ಸಾಧಕನಿಗೆ ಈ ಅಪಮಾನ ಸರಿಯಲ್ಲ, ಮನಸ್ಸಿಗೆ ಬಹಳ ನೋವಾಗಿದೆ’: ಧ್ರುವ ಸರ್ಜಾ

Spread the love ಬೆಂಗಳೂರು ಹೊರವಲಯದ ಅಭಿಮಾನ್ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ ಸ್ಯಾಂಡಲ್​ವುಡ್​ನ ಸಾಹಸಿಂಹ ಖ್ಯಾತಿಯ ವಿಷ್ಣುವರ್ಧನ್​​​ ಸ್ಮಾರಕವನ್ನು ತೆರವು ಮಾಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ