Breaking News

ಯೋಗಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ – ಉದ್ದವ್ ವಿರುದ್ಧ ದೂರು

Spread the love

ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ ಬೆನ್ನಲ್ಲೇ ಈಗ ಬಿಜೆಪಿ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ದೂರು ನೀಡಿದೆ.

ಉದ್ಧವ್ ಠಾಕ್ರೆ, ಶಿವಸೇನೆಯ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕಿ ರಶ್ಮಿ ಠಾಕ್ರೆ, ಯುವಾ ಸೇನಾ ಅಧ್ಯಕ್ಷ ವರುಣ್ ಸರ್ದೇಸಾಯಿ ಅವರ ವಿರುದ್ಧ ಬಿಜೆಪಿ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಬೇಕೆಂದು ಆಗ್ರಹಿಸಿದೆ.

ಮೂರು ದೂರುಗಳು ನಾಸಿಕ್‌ನಲ್ಲಿ ದಾಖಲಾಗಿದ್ದು, ಪೊಲೀಸರು ದೂರು ದಾಖಲಾಗಿದ್ದನ್ನು ಖಚಿತಪಡಿಸಿದ್ದಾರೆ.

2018ರಲ್ಲಿ ಶಿವಾಜಿ ಫೋಟೋಗೆ ಚಪ್ಪಲಿ ಹಾಕಿಕೊಂಡು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಲಾರ್ಪಣೆ ಮಾಡಿದ್ದರು. ಈ ವಿಚಾರವನ್ನು ಉಲ್ಲೇಖಿಸಿ ಉದ್ಧವ್ ಠಾಕ್ರೆ ಶಿವಾಜಿಗೆ ಅವಮಾನಗೈದ ಯೋಗಿ ಆದಿತ್ಯನಾಥ್‌ಗೆ ಚಪ್ಪಲಿಯಲ್ಲಿ ಹೊಡೆಯಬೇಕು ಎಂದು ಹೇಳಿದ್ದರು.  2018 ರಲ್ಲಿ ಉದ್ಧವ್ ಠಾಕ್ರೆ ಈ ಹೇಳಿಕೆ ನೀಡಿದ್ದು, ಈ ವೇಳೆ ಠಾಕ್ರೆ ಮುಖ್ಯಮಂತ್ರಿ ಆಗಿರಲಿಲ್ಲ.

ದೂರಿನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ಬಿಜೆಪಿ, ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾತ್ರ ಅಲ್ಲ ಅವರು ಗೋರಖ್‌ಪುರ ಪೀಠದ ಮುಖ್ಯಸ್ಥರಾಗಿದ್ದಾರೆ. ಈ ಹೇಳಿಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಅಷ್ಟೇ ಅಲ್ಲದೇ ಅವರು ಮುಖ್ಯಮಂತ್ರಿ ಆಗಿದ್ದು, ಸಾಂವಿಧಾನಿಕ ಹುದ್ದೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ