Breaking News
Home / ರಾಜಕೀಯ / ಮೈಸೂರು ಪ್ರಕರಣದ ತಪ್ಪಿತಸ್ಥರಿಗೆ ಶೀಘ್ರವೇ ಶಿಕ್ಷೆ ಆಗಲಿದೆ : ಸಚಿವೆ ಜೊಲ್ಲೆ

ಮೈಸೂರು ಪ್ರಕರಣದ ತಪ್ಪಿತಸ್ಥರಿಗೆ ಶೀಘ್ರವೇ ಶಿಕ್ಷೆ ಆಗಲಿದೆ : ಸಚಿವೆ ಜೊಲ್ಲೆ

Spread the love

ಮೈಸೂರು : ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ತಪ್ಪಿತಸ್ಥರನ್ನು ಪತ್ತೆಹಚ್ಚಿ ಅವರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಸಚಿವೆ ನಮ್ಮ ಸರಕಾರ ಈ ಕೇಸನ್ನು ಗಂಭೀರವಾಗಿ ಪರಿಗಣಿಸಿದೆ, ಶೀಘ್ರವೇ ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ, ಅಲ್ಲದೆ ಹೆಣ್ಣು ಮಕ್ಕಳ ಸುರಕ್ಷತೆಗೆ ಇನ್ನೂ ಹೆಚ್ಚಿನ ಗಮನಹರಿಸಲಾಗುವುದು ಏನದು ಹೇಳಿದರು.

ಬಳಿಕ ಮಾತನಾಡಿದ ಅವರು ನಾನು ಇನ್ನೂ ಎರಡು ದಿನ ಯಾರ ಜೊತೆಯೂ ಮಾತಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಸಂತ್ರಸ್ತೆ ಹೇಳಿದ್ದಾರೆ ಹಾಗಾಗಿ ಅವರನ್ನು ಮಾತನಾಡಿಸಲು ಹೋಗಲ್ಲ, ಬೇರೆ ಸರಕಾರಗಳು ಇದ್ದ ಸಂದರ್ಭದಲ್ಲಿಯೂ ಈ ರೀತಿಯ ಪ್ರಕರಣಗಳು ನಡೆದಿವೆ, ಆದರೆ ನಮ್ಮ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.

ಸದ್ಯ ಯುವತಿ ಚೇತರಿಸಿಕೊಳ್ಳುತ್ತಿದ್ದು ಇನ್ನು ಎರಡು ಮೂರು ದಿನಗಳ ಕಾಲ ಯುವತಿಗೆ ವಿಶ್ರಾಂತಿಯ ಅಗತ್ಯವಿರುವ ಕಾರಣ ಆ ಬಳಿಕ ಯುವತಿಯ ಹೇಳಿಕೆಯನ್ನು ಪಡೆದುಕೊಳ್ಳಲಾಗುವುದು ಎಂದಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ