ಬೆಳಗಾವಿ : ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಬೀದಿ ದೀಪಗಳನ್ನು ಶಾಸಕ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಅರವಿಂದ್ ಕಾರ್ಚಿ ಅವರು ಉದ್ಘಾಟಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದ ಮೇರೆಗೆ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಾದ ಧರನಟ್ಟಿ, ಭರಮ್ಯಾನಟ್ಟಿ ಮತ್ತು ಕರುವಿನಕುಂಪ್ಪಿ ಗ್ರಾಮಗಳಲ್ಲಿ ಬಹು ವೆಚ್ಚದಲ್ಲಿ ನಿರ್ಮಿಸಲಾದ ಬೀದಿ ದೀಪ ಗಳಿಗೆ ಕಾರ್ಚಿ ಅವರು ಚಾಲನೆ ನೀಡಿದ್ದಾರೆ.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಗ್ರಾಮದ ಮುಖಂಡರು ಮತ್ತು ಯುವಕರು ಹಾಜರಿದ್ದರು.