Breaking News

ಆ ಹುಡುಗಿ ಕತ್ತಲಲ್ಲಿ ಹೋಗಲೇ ಬಾರದಿತ್ತು ಎಂದವರಿಗೆ ಉತ್ತರಿಸಿದ ಇಂದ್ರಜಿತ್ ಲಂಕೇಶ್

Spread the love

ಮೈಸೂರಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಅನೇಕರು ಹುಡುಗಿಯದ್ದೇ ತಪ್ಪು ಎಂಬಂತೆ ಮಾತನಾಡಿದ್ದಾರೆ. ಆಕೆಗೆ ಕತ್ತಲಲ್ಲಿ ಹೋಗುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ತಲೆ ಎತ್ತಿದ್ದ ಡ್ರಗ್ಸ್​ ಪ್ರಕರಣದಲ್ಲಿ ಹಲವು ಆರೋಪ ಮಾಡಿ ಸುದ್ದಿಯಾಗಿದ್ದ ಅವರು, ಇತ್ತೀಚಿಗಿನ ದರ್ಶನ್​ ಪ್ರಕರಣದಲ್ಲಿ ಕೆಲ ಆರೋಪ ಮಾಡಿ ಗಮನ ಸೆಳೆದಿದ್ದರು. ಈಗ ಮೈಸೂರಿನಲ್ಲಿ ನಡೆದ ಗ್ಯಾಂಗ್​ ರೇಪ್​ ವಿಚಾರವಾಗಿ ಅವರು ಮಾತನಾಡಿದ್ದಾರೆ.

ಮೈಸೂರಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಅನೇಕರು ಹುಡುಗಿಯದ್ದೇ ತಪ್ಪು ಎಂಬಂತೆ ಮಾತನಾಡಿದ್ದಾರೆ. ಆಕೆಗೆ ಕತ್ತಲಲ್ಲಿ ಹೋಗುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಇಂದ್ರಜಿತ್​, ‘ಕತ್ತಲಲ್ಲಿ ಹೋಗಬಾರದಿತ್ತು ಎಂದರೆ ಹೇಗೆ? ಆಕೆಗೆ ಎಲ್ಲ ಕಡೆ ಸುತ್ತಾಡುವ ಹಕ್ಕಿತ್ತು. ಹೀಗಿದ್ದಾಗ ಆಕೆಗೆ ರಕ್ಷಣೆಗೆ ಕೊಡೋದು ನಿಮ್ಮ (ಪೊಲೀಸರ) ಕರ್ತವ್ಯವಾಗಿತ್ತು’ ಎಂದಿದ್ದಾರೆ.


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ