Breaking News

ಸಾಮೂಹಿಕ ಅತ್ಯಾಚಾರ: ನಮ್ಮಲ್ಲಿಯ ಕಳ್ಳರು ಪೊಲೀಸರಿಗಿಂತ ಬುದ್ಧಿವಂತರಿದ್ದಾರೆ- ವಿನಯ್​ ಗುರೂಜಿ

Spread the love

ರಾಯಚೂರು: ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ಕುರಿತು ಅವಧೂತ ವಿನಯ್​ ಗುರೂಜಿ ಪ್ರತಿಕ್ರಿಯೆ ನೀಡಿದ್ದು, ನಮ್ಮಲ್ಲಿಯ ಕಳ್ಳರು ಪೊಲೀಸರಿಗಿಂತ ಬುದ್ಧಿವಂತರಿದ್ದಾರೆ, ಕಾನೂನನ್ನು ಬಿಗಿಪಡಿಸುವದರ ಮೂಲಕ ಹೆಣ್ಣುಮಕ್ಕಳನ್ನು ಕಾಪಾಡಬೇಕು ಎಂದಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ರೀತಿಯ ಪ್ರಕರಣಕ್ಕೆ ಬೇರೆ ದೇಶಗಳಲ್ಲಿ ಬೇಲ್ ಸಿಗಲ್ಲ, ಆದ್ರೆ ನಮ್ಮ ಭಾರತ ಕಾನೂನಲ್ಲಿ ಕೃತ್ಯ ಮಾಡಿದವರು ಬಚಾವ್ ಆಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳು ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಯ ವಿಪರೀತ ಆಚರಣೆಗಳೇ ಈ ಘಟನೆಗಳ ಮೇಲೆ ಪರಿಣಾಮ ಬೀರಿವೆ.

ರಾಷ್ಟ್ರದ ಪ್ರಧಾನಿಗೆ ಇರುವಷ್ಟೇ ಜವಾಬ್ದಾರಿ ಭಾರತದ ಪ್ರತಿಯೊಬ್ಬ ಪ್ರಜೆಗೂ ಇರುತ್ತದೆ. ಸರ್ಕಾರ ಏಕಸ್ವರಕ್ಕೆ ಬಂದು ಬಿಗಿಯಾದ ಕಾನೂನನ್ನು ಜಾರಿಗೊಳಿಸಬೇಕು. ಬೇರೆ ದೇಶಗಳಲ್ಲಿರುವಂತಹ ಕಠಿಣ ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರುವದು ಈ ಸಂದರ್ಭದಲ್ಲಿ ಅನಿವಾರ್ಯ. ನಾನು ಅಹಿಂಸಾವಾದಿ, ಇನ್ನೊಬ್ಬರನ್ನು ಕೊಲ್ಲಿ ಎಂದು ಹೇಳಬಾರದು ಆದ್ರೆ ಲಿಮಿಟ್ ಕ್ರಾಸ್ ಆದವರನ್ನ ಆಪರೇಟ್ ಮಾಡ್ಲೆಬೇಕು ಎಂದಿದ್ದಾರೆ.


Spread the love

About Laxminews 24x7

Check Also

ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ

Spread the loveಬೆಂಗಳೂರು, ಜೂನ್ 24: ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ