Breaking News
Home / ಜಿಲ್ಲೆ / ಬೆಳಗಾವಿ / ಸಾಲಗಾರರ ‌ಕಾಟಕ್ಕೆ‌ ಬೇಸತ್ತು‌, ಫೇಸ್ಬುಕ್ ಲೈವ್ ನಲ್ಲಿಯೇ‌ ರೈತನೋರ್ವ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ ಯತ್ನ

ಸಾಲಗಾರರ ‌ಕಾಟಕ್ಕೆ‌ ಬೇಸತ್ತು‌, ಫೇಸ್ಬುಕ್ ಲೈವ್ ನಲ್ಲಿಯೇ‌ ರೈತನೋರ್ವ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ ಯತ್ನ

Spread the love

ಬೆಳಗಾವಿ: ಸಾಲಗಾರರ ‌ಕಾಟಕ್ಕೆ‌ ಬೇಸತ್ತು‌, ಫೇಸ್ಬುಕ್ ಲೈವ್ ನಲ್ಲಿಯೇ‌ ರೈತನೋರ್ವ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ‌ ಘಟನೆ ನಿನ್ನೆ ಸಂಜೆ ನಡೆದಿದೆ.

ಗೋಕಾಕ ತಾಲ್ಲೂಕು ಮಕ್ಕಳಗೇರಿ ಗ್ರಾಮದ‌ ಲಕ್ಷ್ಮಣ ಈಳಗೇರ ಎಂಬಾತನೇ ಆತ್ಮಹತ್ಯೆಗೆ ‌ಯತ್ನಿಸಿದ ರೈತ. ಅದೃಷ್ಟವಶಾತ್ ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಆತನನ್ನು ಗೋಕಾಕ‌ ತಾಲೂಕು ಆಸ್ಪತ್ರೆಯಲ್ಲಿ‌ ದಾಖಲಿಸಲಾಗಿದೆ. ರೈತ ಮಾಡಿರುವ ಫೇಸ್ಬುಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.
ಸಂತ್ರಸ್ತ ರೈತ ವಿಷಪ್ರಾಷಣ ಮಾಡುವ ಮುಂಚೆ‌ ತನ್ನ ಈ ನಿರ್ಧಾರಕ್ಕೆ ಕಾರಣ ಏನು‌ ಎನ್ನುವುದನ್ನು ತಿಳಿಸಿದ್ದು, ಮೂವರು ಆರೋಪಿಗಳ ಹೆಸರುಗಳನ್ನು ಹೇಳಿದ್ದಾನೆ. ಆರೋಪಿಗಳು‌ ತನ್ನ ಟ್ರ್ಯಾಕ್ಟರ್ ಕಸಿದುಕೊಂಡು ಹೋಗಿ ಕಿರುಕುಳ ನೀಡಿದ್ದಾರೆಂದು ಆತ ಆರೋಪಿಸಿದ್ದಾನೆ.

 

ಸಂತ್ರಸ್ತ ರೈತ ವಿಡಿಯೊದಲ್ಲಿ ಹೇಳಿರುವ ಪ್ರಕಾರ, ವ್ಯವಹಾರಕ್ಕೆ ಸಂಬಂಧಪಟ್ಟಂತೆ ಆರೋಪಿಗಳಾದ ಅರುಣ ಪವಾರ, ಅಶೋಕ ಅಂಕಲಗಿ ಮತ್ತು ಯಲ್ಲಪ್ಪ ಗಸ್ತಿ ಈ ಮೂವರು ಆತನಿಗೆ ಕಿರುಕುಳ‌ ನೀಡಿದ್ದಾರೆ. ಮನೆ ಮುಂದಿನ ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಿದ್ದಾರೆ. ಒಮ್ಮೆ ರೂ.25 ಸಾವಿರ, ಇನ್ನೊಮ್ಮೆ ರೂ.1 ಲಕ್ಷ ಕಟ್ಟಿದರೂ‌ ಮೂರು ತಿಂಗಳು ಕಳೆದರೂ ಟ್ರ್ಯಾಕ್ಟರ್ ಬಿಟ್ಟು ಕೊಟ್ಟಿಲ್ಲ. ಇನ್ನೂ ರೂ. 3.5 ಲಕ್ಷ ಪಾವತಿಸದಿದ್ದರೆ ನಿನ್ನ ಹೊಲ, ಮನೆ ಮಾರಿಸ್ತೀವಿ. ಹೆಂಡತಿ ಮಕ್ಕಳನ್ನ ಬಿಡೋದಿಲ್ಲ ಎಂದು ಧಮ್ಕಿ ಹಾಕಿದ್ದಾರೆ.

ಮಾನಸಿಕ‌ ಹಿಂಸೆ ತಾಳಲಾಗದೇ ವಿಷ ಸೇವನೆ ಮಾಡುತ್ತಿದ್ದೇನೆ ಎಂದು ಹೇಳಿ ಕೀಟನಾಶಕ ಕುಡಿದಿದ್ದಾನೆ. ವಿಡಿಯೋ ಗಮನಿಸಿದ ಕುಟುಂಬಸ್ಥರಿಂದ ಕೂಡಲೇ ಆತನನ್ನು ಗೋಕಾಕ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ