Breaking News
Home / ಜಿಲ್ಲೆ / ಬೆಂಗಳೂರು / ಕೋವಿಡ್ ಮೂರನೆ ಅಲೆಯ ಸಂಬಂಧ ಯಾವ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ?

ಕೋವಿಡ್ ಮೂರನೆ ಅಲೆಯ ಸಂಬಂಧ ಯಾವ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ?

Spread the love

ಬೆಂಗಳೂರು, ಆ.28: ಸಂಭಾವ್ಯ ಕೋವಿಡ್ ಮೂರನೆ ಅಲೆಯ ಸಂಬಂಧ ಯಾವ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡಿದೆ.

ಕೋವಿಡ್ ನಿರ್ವಹಣೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಶನಿವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ಪೀಠವೂ, ಸೋಂಕು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ. ರಾಜ್ಯ ವ್ಯಾಪ್ತಿಯಲ್ಲಿ ಸಂಭಾವ್ಯ ಕೋವಿಡ್ ಮೂರನೆ ಅಲೆ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳೇನು. ಆಮ್ಲಜನಕ(ಆಕ್ಸಿಜನ್) ದಾಸ್ತಾನು ಎಷ್ಟಿದೆ. ತುರ್ತು ಪರಿಸ್ಥಿತಿ ಎದುರಿಸಲು ಆಮ್ಲಜನಕ ದಾಸ್ತಾನು ಇದೆಯೇ ಎಂದು ಸರಕಾರದ ಪರ ವಕೀಲರನ್ನು ಪೀಠವೂ ಪ್ರಶ್ನೆ ಮಾಡಿದರು.

ಈ ವೇಳೆ ಸರಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ಕೋವಿಡ್ ಲಸಿಕಾರಣ ಚುರುಕುಗೊಂಡಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದೇ ರೀತಿ, ಆಮ್ಲಜನಕ ಪೂರೈಕೆ ಹೆಚ್ಚಿಸಲು ರಾಜ್ಯದಲ್ಲಿ 245 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಆರಂಭಿಸಲಾಗುತ್ತಿದೆ. ಜತೆಗೆ, ಈಗಾಗಲೇ 121 ಘಟಕಗಳು ಸ್ಥಾಪನೆಯಾಗಿದ್ದು, 96 ಘಟಕಗಳು ಉತ್ಪಾದನೆಯಲ್ಲಿ ತೊಡಗಿವೆ ಎಂದು ತಿಳಿಸಿದರು.

ತದನಂತರ, ವಾದ ಆಲಿಸಿದ ಪೀಠವೂ, ಕೋವಿಡ್ ಮೂರನೇ ಅಲೆ ಎದುರಿಸಲು ಕೈಗೊಂಡ ಕ್ರಮಗಳ ಕುರಿತು ವಿವರವಾದ ವರದಿಯನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಸೆ.8ಕ್ಕೆ ಮುಂದೂಡಿಕೆ ಮಾಡಲಾಯಿತು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ