ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್ ನಂ. 54ರ ರಹವಾಸಿಗಳು ಚುನಾವಣೆ ಬಹಿಷ್ಕರಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ 1995 ರಿಂದ ಇಲ್ಲಿನ ಚನ್ನಮ್ಮ ನಗರದ ಸ್ವಾಮಿನಾಥ್ ಕಾಲನಿ ಮತ್ತು ಸುತ್ತಲ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬುವುದು ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ.1995ರಿಂದಲೂ ಮಹಾನಗರ ಪಾಲಿಕೆಗೆ ನಿಯಮಿತವಾಗಿ ತೆರಿಗೆ ಕಟ್ಟುತ್ತ ಬರಲಾಗುತ್ತಿದೆ.
ಹೀಗಿದ್ದಾಗೂ ನೀರು, ವಿದ್ಯುತ್, ರಸ್ತೆ, ಒಳಚರಂಡಿ ಸೇರಿದಂತೆ ಯಾವ ಸೌಲಭ್ಯವನ್ನು ನೀಡಲು ಪಾಲಿಕೆ ಮುಂದಾಗಿಲ್ಲ ಎಂದು ನಾಗರಿಕರು ಆಕ್ರೋಶ ಹೊರಹಾಕಿದ್ದಾರೆ. ಇಂದು ಸಂಜೆ ಸಭೆ ನಡೆಸಿದ ನಾಗರಿಕರು ಮತ ಕೇಳಲು ಯಾವ ಪಕ್ಷದ ಅಭ್ಯರ್ಥಿಯೂ ತಮ್ಮ ಗಲ್ಲಿಯಲ್ಲಿ ಬರುವಂತಿಲ್ಲ ಎಂದು ಎಚ್ಚರಿಸಿರುವ ನಾಗರಿಕರು. ನಾಮಫಲಕವನ್ನು ಅಳವಡಿಸುವ ಮೂಲಕ ಮತದಾನವನ್ನು ಬಹಿಷ್ಕರಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.